ನಿರ್ಭಯ ಪ್ರಕರಣ : ಅತ್ಯಾಚಾರಿಗಳಿಗೆ ಕ್ಷಮಾಧಾನ ಇಲ್ಲ: ರಾಮನಾಥ್ ಕೋವಿಂದ್

ದೆಹಲಿ

ದಶಕಗಳಿಂದ ದೇಶದಲ್ಲಿ ನಡೆಯುತ್ತಿರುವ ಮಹಿಳಾ ದೌರ್ಜನ್ಯ, ಅತ್ಯಾಚಾರಕ್ಕೆ ಕಡಿವಾಣ ಹಾಕುವಂತಾ ಮಹತ್ವದ ನಿರ್ಧಾರಗಳು ಇತ್ತೀಚೆಗೆ ಹೊರ  ಬೀಳುತ್ತಿವೆ. ತೆಲಂಗಾಣದಲ್ಲಿ ಪಶುವೈದ್ಯೆ ಅತ್ಯಾಚಾರಿಗಳ ಮೇಲೆ ನಡೆಸಿದ ಎನ್ ಕೌಂಟರ್ ಬೆನ್ನಲ್ಲೇ ರಾಷ್ಟ್ರಪತಿಗಳು ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ.

ಪೋಸ್ಕೋ ಅಥವಾ ಯಾವುದೇ ಕಾಯ್ದೆಯಡಿಯಲ್ಲಿ ಅಪರಾಧ ಮಾಡಿದ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಲಾಗುವುದಿಲ್ಲ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೆ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದ ದೆಹಲಿಯಲ್ಲಿ ನಿರ್ಭಯಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಆರೋಪಿಯ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಸುಪ್ರೀಂಕೋರ್ಟ್ ವಿಧಿಸಿರುವ ಮರಣದಂಡನೆ ಆದೇಶದಿಂದ ಮುಕ್ತಿ ಕೊಡಬೇಕು. ತನಗೆ ಕ್ಷಮದಾನ ನೀಡಬೇಕೆಂದು ನಿರ್ಭಯಾ ಅತ್ಯಾಚಾರ ಆರೋಪಿ ವಿನಯ್ ಶರ್ಮಾ ಅರ್ಜಿ ಸಲ್ಲಿಸಿದ್ದನು. ದೆಹಲಿಯ ಲೆಫ್ಟಿನೆಂಟ್ ಗೌರ್ವನರ್ ಹಾಗೂ ಕೇಂದ್ರ ಗೃಹ ಸಚಿವಾಲಯ ಈ ಅರ್ಜಿಯನ್ನು ತಿರಸ್ಕರಿಸಿದ್ದು, ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲಾಗಿತ್ತು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link