ತಿಮ್ಮಪ್ಪನ ಭಕ್ತರಿಗೆ ಸಿಹಿಸುದ್ದಿ ನೀಡಿದ ಟಿಟಿಡಿ..!

ತಿರುಮಲ:

    ಲಾಕ್‌ಡೌನ್‌ನಿಂದಾಗಿ ಮುಚ್ಚಲ್ಪಟ್ಟಿದ್ದ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯ ಇದಾಗಲೇ ತೆರೆಯಲಾಗಿದ್ದು, ಭಕ್ತರಿಗೆ ದರ್ಕಶನದ ಅವಕಾಶ ಕಲ್ಪಿಸಲಾಗಿದೆ.ಆನ್‌ಲೈನ್‌ ಮೂಲಕ ಟಿಕೆಟ್‌ ವಿತರಣೆ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದಾಗಲೇ ಭಕ್ತಾದಿಗಳು ವೆಂಕಟೇಶ್ವರನ ದರ್ಶನಕ್ಕೆ ಸಾಲುಗಟ್ಟಿ ಬರುತ್ತಿದ್ದಾರೆ.

    ಆದರೆ ಇಲ್ಲಿಯವರೆಗೆ ದಿನಕ್ಕೆ ಕೇವಲ ಆರು ಸಾವಿರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಟಿಟಿಡಿ (ತಿರುಪತಿ ತಿರುಮಲ ಟ್ರಸ್ಟ್‌) ಆನ್​ಲೈನ್ ಟಿಕೆಟ್ ಮೂಲಕ ಟಿಕೆಟ್‌ ಬುಕ್‌ ಮಾಡುವವರು ಆರು ಸಾವಿರಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಅವರು ಇನ್ನೊಂದು ದಿನದವರೆಗೆ ಕಾಯಲೇಬೇಕಾದ ಅನಿವಾರ್ಯತೆ ಇತ್ತು.

    ಇದೀಗ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿರುವುದನ್ನು ಗಮನಿಸಿರುವ ಟಿಟಿಡಿ ಆನ್​ಲೈನ್ ಟಿಕೆಟ್ ಕೋಟಾದ ಪ್ರಮಾಣವನ್ನು ಹೆಚ್ಚಿಸಿದೆ. 6 ಸಾವಿರ ಭಕ್ತರಿಗೆ ದರ್ಶನಕ್ಕೆ ಆನ್​ಲೈನ್ ಟಿಕೆಟ್ ಬದಲು ಇದೀಗ 9 ಸಾವಿರ ಭಕ್ತರಿಗೆ ಟಿಕೆಟ್‌ ನೀಡಲು ಯೋಜನೆ ರೂಪಿಸಲಾಗಿದೆ. ಜುಲೈ 1ರಿಂದ ಪ್ರತಿದಿನ 9 ಸಾವಿರ ಭಕ್ತರಿಗೆ ಅವಕಾಶ ಸಿಗಲಿದೆ.

    ತಿರುಪತಿ ತಿರುಮಲ ದೇವಸ್ಥಾನ ಇನ್ನು ಮುಂದೆ 300 ರೂ.ಗಳ ಆನ್​ಲೈನ್ ಟಿಕೆಟ್ ನೀಡಲಿದೆ. ಪ್ರತಿದಿನ 9 ಸಾವಿರ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಇದರ ಜತೆಗೆ ಪ್ರತಿದಿನ ಮೂರು ಸಾವಿರ ಸರ್ವದರ್ಶನ ಟಿಕೆಟ್​ಗಳನ್ನು ನೀಡಲಾಗುತ್ತದೆ. ಒಂದು ದಿನ ಮುಂಚಿತವಾಗಿ ಈ ಟಿಕೆಟ್​ ತೆಗದುಕೊಳ್ಳಬೇಕಾಗುತ್ತದೆ ಎಂದು ಆಡಳಿತ ಮಂಡಳಿ ಹೇಳಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap