ನವದೆಹಲಿ:
ಸಿಎಎ ಮತ್ತು ವಿಶ್ವವಿದ್ಯಾಲಯಗಳಲ್ಲಿ ನಡೆದ ಹಿಂಸಾಚಾರದ ಕುರಿತು ಚರ್ಚೆ ನಡೆಸಿ ಮುಂದಿನ ಪ್ರತಿಭಟನಾ ಕಾರ್ಯತಂತ್ರದ ಕುರಿತಂತೆ ಇಂದು ಕರೆದಿರುವ ವಿರೋಧ ಪಕ್ಷಗಳ ಸಭೆಗೆ ಬಿ ಎಸ್ ಪಿ ಕೂಡ ಗೈರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಕಾಂಗ್ರೆಸ್ ನೊಂದಿಗಿನ ಭಿನ್ನಾಭಿಪ್ರಾಯದಿಂದ ಬಿಎಸ್ ಪಿ ಸಭೆಗೆ ತನ್ನ ಪ್ರತಿನಿಧಿಯನ್ನು ಕಳುಹಿಸುವುದು ಬಹುತೇಕ ಅನುಮಾನವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ತಾನು ಸಭೆಗೆ ಬರುವುದಿಲ್ಲ ಎಂದು ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಈ ಹಿಂದೆಯೇ ತಿಳಿಸಿದ್ದ ಬೆನ್ನಲೆ ಈ ಬೆಳವಣಿಗೆ ಅಚ್ಚರಿಯ ಜೊತೆಗೆ ಯುಪಿಎಗೆ ತೀವ್ರ ಆಘಾತ ನೀಡಿದಂತಾಗಿದೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








