ಕೊರೋನಾ ಸಾವಿನ ಪ್ರಮಾಣ ತುಂಬಾ ಕಡಿಮೆ ಇದೆ : ಪ್ರಧಾನಿ

ನವದೆಹಲಿ:

       ಕೊರೋನಾ ವೈರಸ್ ತಡೆಯಲೆಂದು ಎರಡೂವರೆ ತಿಂಗಳು ಲಾಕ್​ಡೌನ್​ ಆಗಿದ್ದ ಭಾರತದಲ್ಲಿ ಅನ್​ಲಾಕ್​-1 ಜಾರಿಯಾಗಿ ಎರಡುವಾರ ಕಳೆದಿದೆ. ಹಾಗೇ ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಪ್ರತಿಬಾರಿಯೂ ಲಾಕ್​​ಡೌನ್​ ಮುಂದುವರಿಸುವ ಮೊದಲು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಇಂದು ಕೂಡ 21 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ನಡೆಸಿದರು. 

      ಈ ಎರಡು ವಾರದಲ್ಲಿ ನಮ್ಮ ದೇಶದ ಹಿತದೃಷ್ಠಿಯಿಂದ ಮುಂದಿನ ಭವಿಷ್ಯಕ್ಕೆ ಅನುಕೂಲವಾಗಲಿದೆ.ಎಲ್ಲ ರಾಜ್ಯಗಳಲ್ಲಿ ಇರುವ ವಾಸ್ತವ ಸಂಗತಿಯನ್ನು ತಿಳಿಯಲು ೀ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು  . ಕೊವಿಡ್​-19 ಯಾವ ಪರಿಸ್ಥಿತಿಯಲ್ಲಿದೆ ಎಂಬುದನ್ನು ವಿವರಿಸಿ. ಜತೆಗೆ ನಿಮ್ಮ ಸಲಹೆಗಳನ್ನೂ ನೀಡಿ. ಇದರಿಂದ ನಾವು ಮುಂದಿನ ಕಾರ್ಯತಂತ್ರ ರೂಪಿಸಲು ಸಹಾಯವಾಗುತ್ತದೆ ಎಂದು ಮೋದಿಯವರು ಇಂದು ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗವಹಿಸಿದ 21 ರಾಜ್ಯಗಳ ಮುಖ್ಯಮಂತ್ರಿಗಳಿಗೆ ತಿಳಿಸಿದರು.

      ಭಾರತದಲ್ಲಿ ಕರೊನಾ ವೈರಸ್​ನಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಶೇ.50ಕ್ಕೂ ಹೆಚ್ಚು ಇದೆ. ಹಾಗಾಗಿ ಯಾರೂ ಭಯಪಡುವ ಅಗತ್ಯವಿಲ್ಲ. ಭಾರತದಲ್ಲಿ ಕರೊನಾದಿಂದ ಸಾವನ್ನಪ್ಪುತ್ತಿರುವುದನ್ನು ನೋಡಿದರೆ ನಮಗೆ ಆತಂಕ ಆಗುತ್ತದೆ. ಆದರೆ ಒಂದು ಸತ್ಯವನ್ನು ಎಲ್ಲರೂ ತಿಳಿಯಬೇಕು. ಭಾರತದಲ್ಲಿ ಕೊವಿಡ್​-19ನಿಂದ ಉಂಟಾಗುತ್ತಿರುವ ಸಾವಿನ ಪ್ರಮಾಣ ತುಂಬ ಕಡಿಮೆ ಇದೆ. ನಮ್ಮ ದೇಶ  ಕರೊನಾ ವಿರುದ್ಧ ಸಮರ್ಥವಾಗಿ ಹೋರಾಡುತ್ತಿದೆ ಎಂದು ಪ್ರಧಾನಿ ಹೇಳಿದರು.

     ಈಗಿರುವ ಪರಿಸ್ಥಿತಿಯಲ್ಲಿ ಮಾಸ್ಕ್​ ಇಲ್ಲದೆ ಯಾರೂ ಹೊರಗೆ ಹೋಗಬೇಡಿ. ಆ ಬಗ್ಗೆ ಯೋಚನೆಯನ್ನೂ ಮಾಡಬೇಡಿ. ದೋ ಗಜ್​ ಕೀ ದೂರಿ, ( ಎರಡು ಗಜ ಅಂತರ), ಕೈ ತೊಳೆಯುವುದು, ಸ್ಯಾನಿಟೈಸರ್​ ಬಳಕೆಗಳೆಲ್ಲ ಪ್ರಥಮ ಆದ್ಯತೆಗಳಾಗಿರಲಿ. ಈಗೀಗ ಎಲ್ಲ ಅಂಗಡಿ, ಮಾರುಕಟ್ಟೆಗಳು ತೆರೆದಿವೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link