ನವದೆಹಲಿ: 
 
ಭಾರತವನ್ನು ಹೂಡಿಕೆ ಸ್ನೇಹಿ ಮಾಡಲು ಇನ್ನಷ್ಟು ಪೂರಕ ವಾತಾವರಣ ನಿರ್ಮಿಸಿಕೊಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸದ್ಯ ದೆಹಲಿಯಲ್ಲಿ ನಡೆಯುತ್ತಿರುವ ಇಂಡಿಯಾ-ಸ್ವೀಡನ್ ವಾಣಿಜ್ಯ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಹೂಡಿಕೆ ಮಾಡುವುದಕ್ಕೆ ಎಲ್ಲರನ್ನೂ ಆಹ್ವಾನಿಸುವ ಕೆಲಸವನ್ನು ನಾನು ಮಾಡಬಲ್ಲೆ ಮತ್ತು ಭಾರತ ಸರ್ಕಾರ ಹೂಡಿಕೆದಾರರಿಗೆ ಅನುಕೂಲವಾಗುವ ರೀತಿಯಲ್ಲಿ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧವಾಗಿದೆ. ಆ ಸುಧಾರಣೆ ಬ್ಯಾಂಕಿಂಗ್ ಇರಬಹುದು ಅಥವಾ ಇನ್ಶೂರೆನ್ಸ್ ಇರಬಹುದು ಅಥವಾ ಮೈನಿಂಗ್ ಹೀಗೆ ಯಾವುದೇ ಸೆಕ್ಟರ್ನಲ್ಲಾದರೂ ಸರಿ ಅವಶ್ಯಕತೆ ಬಿದ್ದರೆ ನಮ್ಮ ಸರ್ಕಾರ ಸುಧಾರಣಾ ಕ್ರಮಗಳನ್ನು ರೂಪಿಸಲು ತಯಾರಿದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 


