ಶ್ರೀನಗರ:
ಸದಾ ಉಗ್ರರ ಪುಂಡಾಟಗಳಿಂದ ತುಂಬಿರುವ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಈ ಬಾರಿ ಉಗ್ರರ ಉಪಟಳ ಮಿತಿ ಮೀರಿದ್ದು, ಮೂವರು ಪೊಲೀಸರನ್ನು ಉಗ್ರರು ಅಪಹರಿಸಿ ಹತ್ಯೆ ಮಾಡಿದ ಬೆನ್ನಲ್ಲೇ ಕಾಶ್ಮೀರದ ಸ್ಥಳೀಯ ಪೊಲೀಸರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಉಗ್ರರ ಬೆದರಿಕೆಗೆ ಹೆದರಿ ಶುಕ್ರವಾರದಿಂದ ಈ ವರೆಗೂ ಸರಿ ಸುಮಾರು 40 ಪೊಲೀಸ್ ಅಧಿಕಾರಿಗಳು ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ವಾಸ್ತವದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ನಕಲಿ ಆಗಿದೆ ಎಂದು ತಿಳಿದು ಬಂದಿದೆ , ಇದರಿಂದ ಹೆದರುವ ಅವಶ್ಯಕತೆ ಇಲ್ಲ. ನಿಮ್ಮ ರಕ್ಷಣೆ ನಮ್ಮ ಹೊಣೆ ಎಂದು ಕೇಂದ್ರ ಸರ್ಕಾರ ಪೊಲೀಸರಿಗೆ ದೈರ್ಯ ತುಂಬುವ ಕೆಲಸ ಪ್ರಾರಂಭಿಸಿದೆ .
ಪೊಲೀಸರ ರಾಜೀನಾಮೆ ಬಗ್ಗೆ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಬಿವಿಆರ್ ಸುಬ್ರಮಣಿಯಮ್ ಅವರು, ರಾಜ್ಯದಲ್ಲಿರುವ ಎಸ್ ಪಿಒ ಅಧಿಕಾರಿಗಳಿಗೆ ಹೋಲಿಕೆ ಮಾಡಿದರೆ ರಾಜಿನಾಮೆ ನೀಡಿರುವ ಅಧಿಕಾರಿಗಳ ಸಂಖ್ಯೆ ತೀರಾ ಕಡಿಮೆ. ರಾಜ್ಯದಲ್ಲಿ ಸುಮಾರು 30 ಸಾವಿರ ಎಸ್ ಪಿಒ ಅಧಿಕಾರಿಗಳಿದ್ದು, ಈ ವರೆಗು 40 ಅಧಿಕಾರಿಗಳು ಮಾತ್ರ ರಾಜಿನಾಮೆ ನೀಡಿದ್ದಾರೆ. ಹೀಗಾಗಿ ಎಸ್ ಪಿಒ ಅಧಿಕಾರಿಗಳು ಉಗ್ರರಿಗೆ ಹೆದರಿದ್ದಾರೆ ಎಂಬ ತರ್ಕ ಸರಿಯಲ್ಲ. ಉಗ್ರರ ಮಟ್ಟ ಹಾಕಲು ಸೇನೆ ಸನ್ನದ್ಧವಾಗಿದ್ದು, ಉಗ್ರರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ನಾವು ಸಿದ್ದರಿದ್ದೇವೆ ಎಂದು ಹೇಳಿದ್ದಾರೆ.
ಕಳೆದವಾರವಷ್ಚೇ ಕಾಶ್ಮೀರದ ಪುಲ್ವಾಮದಿಂದ ನಾಲ್ಕು ಎಸ್ ಪಿಒ ಅಧಿಕಾರಿಗಳನ್ನು ಉಗ್ರರು ಅಪಹರಣ ಮಾಡಿದ್ದರು. ಈ ಪೈಕಿ ಮೂವರು ಅಧಿಕಾರಿಗಳು ಉಗ್ರರು ಕೊಂದು ಹಾಕಿದ್ದರು. ಓರ್ವ ಅಧಿಕಾರಿ ಸ್ಥಳೀಯರ ನೆರವಿನಿಂದಾಗಿ ತಪ್ಪಿಸಿಕೊಂಡಿದ್ದ. ಬಳಿಕ ಹೇಳಿಕೆ ಬಿಡುಗಡೆ ಮಾಡಿದ್ದ ಉಗ್ರರು ಭದ್ರತಾ ಪಡೆಗಳಲ್ಲಿ ಕೆಲಸ ಮಾಡುತ್ತಿರುವ ಕಾಶ್ಮೀರಿಗರು ಕೂಡಲೇ ರಾಜಿನಾಮೆ ನೀಡಬೇಕು ಇಲ್ಲವೇ ಸಾಯಲು ಸಿದ್ಧರಾಗಿ ಎಂದು ಬೆದರಿಕೆ ಹಾಕಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








