ಬಿಜೆಪಿಯವರು ನಾಡಿನ ಜನರನ್ನು ಹೆದರಿಸುತ್ತಿದ್ದಾರೆ:ಖರ್ಗೆ

ಬೆಂಗಳೂರು:

     ಕೇಂದ್ರದಲ್ಲಿ ನಮ್ಮ ಸರ್ಕಾರವಿದೆ ಎಂದು ಬಿಜೆಪಿಯವರು ನಾಡಿನ ಜನರನ್ನು ಹೆದರಿಸುತ್ತಿದ್ದಾರೆ. ಅವರು ಪಕ್ಷದಲ್ಲಿ ಒಡಕು, ಭಿನ್ನಾಭಿಪ್ರಾಯ ಮೂಡಿಸುವಲ್ಲಿ ನಿಸ್ಸೀಮರು ಎಂದು ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

      ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು 47 ವರ್ಷಗಳಿಂದ ನೋಡುತ್ತಲೇ ಬಂದಿದ್ದೇನೆ, ಎಲ್ಲರಿಗೂ ಒಂದೊಂದು ಸ್ಥಾನವನ್ನು ಪಕ್ಷ ನೀಡಲಿದೆ, ಯಾರಿಗೆ ಯಾವ ಸ್ಥಾನ ನೀಡಬೇಕು, ಕಾರ್ಯಕರ್ತರಿಗೆ ಯಾವ ಸ್ಥಾನಮಾನ ನೀಡಬೇಕು ಎನ್ನುವುದು ಸರ್ಕಾರಕ್ಕೆ ಗೊತ್ತಿದೆ. ಆದರೆ ಪಕ್ಷದಲ್ಲಿ ಒಡಕು ಮೂಡಿಸುವುದು ಭಿನ್ನಾಭಿಪ್ರಾಯ ಉಂಟುಮಾಡುವುದು ಬಿಜೆಪಿಯ ಕೆಲಸ ಬಿಜೆಪಿಯು ರಾಜಕೀಯ ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟರು.

      ಗೋವಾದಲ್ಲಿ ಬಹುಮತವಿಲ್ಲದಿದ್ದರೂ ಸರ್ಕಾರ ರಚಿಸಿದ್ದರು. ಈಗ ಕರ್ನಾಟಕದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದ್ದಾರೆ ಆದರೆ ಇದು ಆಗದ ಕೆಲಸ. ಮುಖ್ಯಮಂತ್ರಿಗಳು ತಾವು ನೀಡಿದ ಹೇಳಿಕೆಗೆ ಸ್ಪಷ್ಟನೆ ಕೊಟ್ಟಿದ್ದಾರೆ ಆದರೂ ಅವರು ರಾಜ್ಯಪಾಲರಿಗೆ, ಕೇಂದ್ರ ಸರ್ಕಾರಕ್ಕೆ ದೂರು ಕೊಡುತ್ತಾರೆ. ಕೇಂದ್ರದಲ್ಲಿ ತಮ್ಮ ಸರ್ಕಾರವಿದೆ ಎಂದ ಮಾತ್ರಕ್ಕೆ ಏನು ಬೇಕಾದರೂ ಮಾಡಬಹುದು ಎಂದು ತಿಳಿದುಕೊಂಡಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

       ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲ ಶಾಸಕರಿಗೆ ಸ್ಥಾನಮಾನ ಕೊಡಲು ಸಾಧ್ಯನೇ ಇಲ್ಲ. ಇದು ವಿರೋಧ ಪಕ್ಷದವರು ಬರೀ ಗುಲ್ಲೆಬ್ಬಿಸಿರೋದು. ಹುಲಿ ಬಂತು ಹುಲಿ ಕಥೆ ಅಷ್ಟೇ. ಬರುವ ಲೋಕಸಭೆ ಚುನಾವಣೆಯಲ್ಲಿ ಅವರ ಬಣ್ಣ ಬಯಲಾಗುತ್ತದೆ ಎಂದರು.

                   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap