ಹರಿಯಾಣ
ಹರಿಯಾಣದ ಹಿಸಾರ್ ಜಿಲ್ಲೆಯ ಆದಮ್ ಪುರ ವಿಧಾನ ಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಭಜನ್ ಲಾಲ್ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಬೀರ್ ಸಿಂಗ್ ದಲಾಲ್ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ರಾಜ್ಯ ಬಿಜೆಪಿ ಅಧ್ಯಕ್ಷ ಸುಭಾಷ್ ಬರಾಲ್ ಮತ್ತು ರಾಜ್ಯದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ಡಾ. ಅನಿಲ್ ಜೈನ್ ಉಪಸ್ಥಿತಿಯಲ್ಲಿ ಅವರು
ಪಕ್ಷದ ಪ್ರಧಾನ ಕಚೇರಿಯಲ್ಲಿಂದು ಬಿಜೆಪಿ ಸೇರ್ಪಡೆಗೊಂಡರು.ನಂತರ ಮಾತನಾಡಿದ ಅವರು, ಬಿಜೆಪಿ ಪಕ್ಷದ ನೀತಿಯಿಂದ ನಾನು ಪ್ರಭಾವಿತನಾಗಿದ್ದೇನೆ. ಕಳೆದ ಐದು ವರ್ಷಗಳಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಕೆಲಸದಿಂದ ಸಾಮಾನ್ಯ ಜನತೆ ಪಕ್ಷದ ಮೇಲೆ ವಿಶ್ವಾಸವಿಟ್ಟಿದ್ದಾರೆ ಎಂದರು.
ಪ್ರಧಾನಿ ಮೋದಿ ಅವರಿಗೆ ದೇಶವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವ ಶಕ್ತಿ ಇದೆ. ಸ್ವಹಿತಕ್ಕಾಗಿ ಅಲ್ಲ, ಬದಲಾಗಿ ರಾಷ್ಟ್ರ ಹಿತಕ್ಕಾಗಿ ಬಿಜೆಪಿಗೆ ಬೆಂಬಲಿಸಿ ಎಂದು ಮೋದಿ ಅವರು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎಂದು ಅವರು ಸ್ಮರಿಸಿಕೊಂಡರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
