ಪುದುಚೇರಿ: 
ಪುದುಚೇರಿಯ ಮುಖ್ಯಮಂತ್ರಿಗಳಾದ ಶ್ರೀ ವಿ.ನಾರಾಯಣಸ್ವಾಮಿ ಅವರು ಇಂದು ಬೆಳಿಗ್ಗೆ ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಚ ಭಾರತ ಅಭಿಯಾನದ ಭಾಗವಾಗಿ ತಾವೆ ಸ್ವತಹ ಸಲಾಕೆ ಹಿಡಿದು ಚರಂಡಿಗಿಳಿದು ಸ್ಛಚ್ಛತೆ ಮಾಡಿರುವುದು ಈಗ ಬಹಳ ಮೆಚ್ಚುಗೆಗೆ ಪಾತ್ರವಾಗಿದೆ .
ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ಸ್ವಚ್ಛ ಭಾರತದ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಪುದುಚೇರಿ ಸಿಎಂ ನಾರಾಯಣಸ್ವಾಮಿ ಸಾಥ್ ನೀಡಿದರು. ಚರಂಡಿ ಸ್ವಚ್ಛಗೊಳಿಸಿರುವ ವಿಡಿಯೊವನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೊದಲ್ಲಿ ಸಿಎಂ ಅವರು ಬಿಳಿ ವಸ್ತ್ರ ಧರಿಸಿದ್ದು, ಪಂಚೆಯನ್ನು ಮೇಲಕ್ಕೆ ಎತ್ತಿಕಟ್ಟಿ ಕೈಗೆ ಗ್ಲೌಸ್ ಹಾಕಿರುವ ಸಿಎಂ ಸಲಾಕೆ ಹಿಡಿದು ಚರಂಡಿ ಸ್ವಚ್ಛಗೊಳಿಸಿದ್ದಾರೆ. ಅವರ ಈ ಕಾರ್ಯಕ್ಕೆ ಬೆಂಬಲಿಗರು ಸಾಥ್ ನೀಡಿದ್ದಾರೆ.
#SwachhataHiSeva HCM @VNarayanasami himself gets down to clean the drainage at Nellithope area, #Puducherry today . pic.twitter.com/i3bEgM3oft
— CMO Puducherry (@CMPuducherry) October 1, 2018
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








