ಬೆಂಗಳೂರು:
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಇಡೀ ಕರ್ನಾಟಕದಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಕೇಸ್ ನಲ್ಲಿದರ್ಶನ್ ಎ2 ಆರೋಪಿಯಾಗಿದ್ದಾರೆ. ರಾಜ್ಯಾದ್ಯಂತ ಈ ಬಗ್ಗೆ ಬಗೆಬಗೆಯ ಚರ್ಚೆ ನಡೆಯುತ್ತಿದೆ.
ಕೆಲವು ಸೆಲೆಬ್ರಿಟಿಗಳು ತಮ್ಮ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ನಟ ಜಗ್ಗೇಶ್ ಕೂಡ ಈ ಬಗ್ಗೆ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.