ಉಪರಾಷ್ಟ್ರಪತಿ ಆಗಮನ : ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು

    ಭಅರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಇಂದು ಸಂಜೆ ಬೆಂಗಳೂರಿಗೆ ಆಗಮಸುತ್ತಿದ್ದು, ಈ ನಿಟ್ಟಿನಲ್ಲಿ  ಪೊಲೀಸ್ ಇಲಾಖೆ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಉಪರಾಷ್ಟ್ರಪತಿ ಆಗಮನದ ಹಿನ್ನೆಲೆ ಸಿಲಿಕಾನ್ ಸಿಟಿಯ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ.

     ಸಂಚಾರಿ ಪೊಲಿಸರು ಹೊರಡಿಸಿರುವ ಮಾರ್ಗಸೂಚಿಯಲ್ಲಿ ಓಲ್ಡ್ ಏರ್ ಪೋರ್ಟ್ ರಸ್ತೆ, ರಾಜಭವನ ರಸ್ತೆ, ಇನ್‌ಫೆಂಟ್ರಿ ರಸ್ತೆ, ಕಬ್ಬನ್‌ ರಸ್ತೆ, ಕ್ವೀನ್ಸ್‌ ರಸ್ತೆ ಮತ್ತು ಎಂಜಿ ರಸ್ತೆಗಳಲ್ಲಿ ವಾಹನ ನಿರ್ಬಂಧ ವಿಧಿಸಲಾಗಿದೆ. ಮಂಗಳವಾರ ಸಂಜೆ 4 ರಿಂದ ಸಂಜೆ 6 ಗಂಟೆಯವರೆಗೆ ವಾಹನ ಸವಾರರು, ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸುವಂತೆ ಸಂಚಾರಿ ಇಲಾಖೆಯು ತಮ್ಮ ಸಂಚಾರ ಸಲಹೆಯಲ್ಲಿ ಮನವಿ ಮಾಡಿದೆ.
       ಗೋಕುಲ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪ‍ಕ ಅಧ್ಯಕ್ಷ ದಿವಂಗತ ಡಾ. ಎಂ.ಎಸ್‌. ರಾಮಯ್ಯ ಅವರ ಜನ್ಮ ಶತಮಾನೋತ್ಸವ ಮಾರ್ಚ್‌ 1ರಂದು (ಬುಧವಾರ) ನ್ಯೂ ಬಿಇಎಲ್‌ ರಸ್ತೆಯ ಎಂ.ಎಸ್‌. ರಾಮಯ್ಯ ನಗರದ ಕಾಲೇಜಿನ ಜ್ಞಾನಗಂಗೋತ್ರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಶತಮಾನೋತ್ಸವ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಸೇರಿ ಹಲವರು ನಾಯಕರು ಭಾಗಿಯಾಗಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap