ಚಾಮರಾಜನಗರ :
ಕಳೆದ ಮೇ 8ರಂದು ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದಲ್ಲಿ ಸೆರೆ ಹಿಡಿದಿದ್ದ ಆನೆಯ ದಂತ ಕತ್ತರಿಸಿ ಕಾಡಿಗೆ ಬಿಟ್ಟ ಪ್ರಯೋಗ ಯಶಸ್ಸು ಕಂಡಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ವಲಯದಂಚಿನ ರೈತರ ಜಮೀನಿಗೆ ನುಗ್ಗಿ ದಾಂಧಲೆ ಮಾಡುತ್ತಿದ್ದ ಕಾಡಾನೆಗೆ ಬಂಡೀಪುರ ಅರಣ್ಯ ಇಲಾಖೆಯು ಕೂಡು ದಂತವನ್ನು ಕತ್ತರಿಸಿ ಆನೆಗೆ ಯಶಸ್ವಿ ಚಿಕಿತ್ಸೆ ಮಾಡಿದೆ. ಈ ಮೂಲಕ ಕಾಡಾನೆಗೆ ನೈಸರ್ಗಿಕವಾಗಿ ಆಹಾರ ಸೇವನೆಗೆ ಅನುವು ಮಾಡಿಕೊಟ್ಟಿದೆ.
ಗುಂಡ್ಲುಪೇಟೆ ತಾಲೂಕಿನ ಹಂಗಳ ಸುತ್ತಮುತ್ತಲಿನ ರೈತರ ಜಮೀನಿನ ಫಸಲು ತಿಂದು ಹಾಳು ಮಾಡುತ್ತಿದ್ದ ಕೂಡು ದಂತ ಕಾಡಾನೆಯ ಹಾವಳಿಗೆ ರೈತರು ಆಕ್ರೋಶಗೊಂಡಿದ್ದರು. ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ ಮೇ ೮ ರಂದು ಕಾಡಾನೆ ಸೆರೆ ಹಿಡಿದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ವಲಯಕ್ಕೆ ಬಿಟ್ಟಿದ್ದರು. ಕಾಡಿಗೆ ಬಿಡುವ ಮುನ್ನ ಆನೆ ದಂತಕ್ಕೆ ಕತ್ತರಿ ಪ್ರಯೋಗ ಮಾಡಲಾಗಿತ್ತು.








