ಮಂಡ್ಯ:
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ ಎಂದು ಸಚಿವ ಸಿ.ಎಸ್ ಪುಟ್ಟರಾಜು ಗಂಭೀರ ಆರೋಪ ಎಸಗಿದ್ದಾರೆ. ಇನ್ನು ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ.
ಅಲ್ಲದೇ ಬಿಜೆಪಿ ಸೇರಲು ಕೇಂದ್ರ ಸಚಿವ ಸ್ಥಾನವೂ ಬೇಡಿಕೆ ಇಟ್ಟಿದ್ದಾರೆ. ಈ ವಿಡಿಯೋ ಸಿಡಿ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದ್ದೇನೆ ಎಂದು ಸಿ.ಎಸ್ ಪುಟ್ಟರಾಜು ಹೊಸಬಾಂಬ್ ಸಿಡಿಸಿದ್ಧಾರೆ.
ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಾಗಲೇ ಸುಮಲತಾರ ಮೇಲೆ ಸಚಿವ ಪುಟ್ಟರಾಜು ಈ ರೀತಿ ಗಂಭೀರ ಆರೋಪ ಮಾಡಿದ್ದಾರೆ. ಸುಮಲತಾ ಅವರು ಬಿಜೆಪಿ ಸೇರಲಿದ್ದಾರೆ.
ಈ ಬಗ್ಗೆ ಖಾಸಗಿ ಹೋಟೆಲ್ನಲ್ಲಿ ಮಾತುಕತೆ ನಡೆಸಿರುವ ವಿಡಿಯೋ ನನ್ನ ಬಳಿಯಿದೆ. ಶೀಘ್ರದಲ್ಲಿಯೇ ಅದನ್ನು ಬಿಡುಗಡೆ ಮಾಡಲಿದ್ದೇನೆ. ಕೇಲವೇ ದಿನಗಳಲ್ಲಿ ಸಾಕ್ಷಿ ಸಮೇತ ವಿಡಿಯೋ ಬೀಡ್ತಿವಿ ಎಂದು ಹೇಳಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
