ನವದೆಹಲಿ:
ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸುತ್ತಿದ್ದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಪೈಪೋಟಿ ಆರಂಭವಾಗಿದೆ. ಈ ಪೈಪೋಟಿ ಮತ್ತಷ್ಟು ತುರುಸುಗೊಂಡಿದೆ. ಇದೀಗ ಇದು ರಸ್ತೆಯಲ್ಲೇ ಕುಳಿತು ಹನುಮಾನ್ ಚಾಲೀಸಾ ಪಠಿಸುವ ಮೂಲಕ ಜನ, ವಾಹನ ಸಂಚಾರಕ್ಕೆ ಅಡ್ಡಿಪಡಿಸುವವರೆಗೂ ವಿಸ್ತರಿಸಿದೆ.
ಹೌರಾ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿರುವ ಹನುಮಾನ್ ದೇಗುಲಗಳಿಗೆ ಪ್ರತಿ ಮಂಗಳವಾರ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಕಾರ್ಯರ್ಕತರು, ಅವುಗಳ ಎದುರಿನ ರಸ್ತೆಯಲ್ಲೇ ಕುಳಿತು ಹನುಮಾನ್ ಚಾಲೀಸಾ ಪಠಿಸುತ್ತಿದ್ದಾರೆ.
ಬುಧವಾರ ಸುದ್ದಿಗಾರರ ಜತೆ ಮಾತನಾಡಿರುವ ಭಾರತೀಯ ಜನತಾಪಕ್ಷದ ಯುವ ಮೋರ್ಚಾದ ಹೌರಾ ಜಿಲ್ಲಾಧ್ಯಕ್ಷ ಒ.ಪಿ. ಸಿಂಗ್, ಸಿಎಂ ಮಮತಾ ಬ್ಯಾನರ್ಜಿ ಅವರ ಆಡಳಿತಕಾಲದಲ್ಲಿ ಶುಕ್ರವಾರ ನಮಾಜ್ ಮಾಡಲು ಮುಸ್ಲಿಮರು ಗ್ರಾಂಡ್ ಟ್ರಂಕ್ ರೋಡ್ ಸೇರಿ ಹಲವು ಪ್ರಮುಖ ರಸ್ತೆಗಳನ್ನು ಬಳಸಿಕೊಂಡು, ವಾಹನ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಇದರಿಂದಾಗಿ ಸಕಾಲದಲ್ಲಿ ಕಚೇರಿ ತಲುಪಲು ಜನರಿಗೆ ತೊಂದರೆಯಾಗುತ್ತಿದೆ. ಈ ಪದ್ಧತಿ ಎಲ್ಲಿಯವರೆಗೂ ಮುಂದುವರಿಯುತ್ತದೋ, ಅಲ್ಲಿಯವರೆಗೆ ನಾವು ಕೂಡ ಪ್ರತಿ ಮಂಗಳವಾರ ಪ್ರಮುಖ ರಸ್ತೆಗಳಲ್ಲಿ ಕುಳಿತು ಹನುಮಾನ್ ಚಾಲೀಸಾ ಪಠಿಸಿ, ಜನ, ವಾಹನ ಸಂಚಾರಕ್ಕೆ ಅಡ್ಡಿಪಡಿಸಲಿದ್ದೇವೆ ಎಂದು ಹೇಳಿದ್ದಾರೆ.
#WATCH WB: Bharatiya Janata Yuva Morcha recite Hanuman Chalisa near Bally Khal in Howrah. OP Singh, BJYM Pres, Howrah says, "GT Road is blocked to offer Friday namaz. Patients die,people can't reach office on time.Recitation continues till Friday Namaz like that is offered (25.6) pic.twitter.com/BscHgYJt2C
— ANI (@ANI) June 26, 2019
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
