ರಾಜ್ಯ ಸಚಿವ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ಕೊಟ್ಟ ಅಮಿತ್ ಶಾ.!

ನವದೆಹಲಿ:

     ರಾಜ್ಯ ಸರ್ಕಾರದ ಸಚಿವ ಸಂಪುಟ ರಚನೆಗೆ ಕೊನೆಗೂ ಬಿಜೆಪಿ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ದೊರಕಿದೆ.ಇಂದು ಸಂಜೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪ ರಾಜ್ಯ ಸಂಪುಟ ರಚನೆಗೆ ಹಸಿರು ನಿಶಾನೆ ತೋರಿಸುವಂತೆ ಕೇಳಿದ್ದರು ಅದಕ್ಕೆ ಅವರು ಸಹ ಒಪ್ಪಿದ್ದಾರೆ ಎನ್ನಲಾಗಿದೆ.

    ಇದೇ ಮಂಗಳವಾರ ಅಂದ್ರೆ ಆಗಸ್ಟ್ 20ರಂದು ಹೈಕಮಾಂಡ್ ಸಂಪುಟ ರಚನೆಗೆ ಸಮಯವನ್ನು ನಿಗದಿ ಮಾಡಿದೆ. ಅಂದು ಬೆಳಗ್ಗೆ 10 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯ ಬಳಿಕ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

    ಮೊದಲ ಹಂತದಲ್ಲಿ 16 ರಿಂದ 18 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ. ಭೇಟಿಯ ವೇಳೆ ಯಡಿಯೂರಪ್ಪ ನವರು ತಾವು ಸಿದ್ಧಪಡಿಸಿದ್ದ ಪಟ್ಟಿಯನ್ನು ಅಮಿತ್ ಶಾವರಿಗೆ ನೀಡಿದ್ದು ಅಂತಿಮವಾಗಿ ಅಮಿತ ಶಾ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ . ಇನ್ನು ಯಾರಿಗೆ ಯಾವ ಸ್ಥಾನ ನೀಡಬೇಕೆಂಬ ವಿಚಾರವನ್ನು ಯಡಿಯೂರಪ್ಪನವರಿಗೆ ತಿಳಿಸಿದ್ದಾರೆ. ಭಾನುವಾರ ಅಥವಾ ಸೋಮವಾರ ಪ್ರಮಾಣ ವಚನ ಸ್ವೀಕರಿಸುವ ನಾಯಕರ ಪಟ್ಟಿಯನ್ನು ಅಮಿತ್ ಶಾ ರವಾನಿಸಲಿದ್ದಾರೆ ಎಂಬ ತಿಲಿದು ಬಂದಿದೆ.

.   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap