ಫಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು:

    ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಸಚಿವ ಸಂಪುಟ ಪುನಾರಚನೆ ಮಾಡುವ ಯೋಚನೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸ್ಪಷ್ಟಪಡಿಸಿದ್ದಾರೆ.

    ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಚಿವರಿಗೆ ಕ್ಷೇತ್ರಗಳ ಟಾಸ್ಕ್‌ ನೀಡಲಾಗಿತ್ತು. ಹೀಗಾಗಿ ಫಲಿತಾಂಶ ಆಧರಿಸಿ ಸಚಿವರ ಬದಲಾವಣೆ ನಡೆಯಲಿದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಆ ರೀತಿಯ ಯಾವುದೇ ಆಲೋಚನೆ ಇಲ್ಲ ಎಂದು ಹೇಳಿದ್ದಾರೆ
   ರಾಜ್ಯ ಸರಕಾರಕ್ಕೆ 1 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಆಯೋಜನೆಯಾಗಿದ್ದ ‘ಮೀಟ್ ದಿ ಪ್ರೆಸ್’ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, “ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಮಾಡುವ ಬಗ್ಗೆ ಯಾವುದೇ ಯೋಚನೆ ಹೊಂದಿಲ್ಲ,” ಎಂದು ತಿಳಿಸಿದ್ದಾರೆ.
    ಲೋಕಸಭೆ ಫಲಿತಾಂಶ ಆಧರಿಸಿ ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಮುಹೂರ್ತ ನಿಗದಿಪಡಿಸಲು ಕಾಂಗ್ರೆಸ್‌ ಹೈಕಮಾಂಡ್‌ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಲೋಕ ಅಖಾಡಕ್ಕೆ ತೆರೆ ಬೀಳುವ ಮುನ್ನವೇ ರಾಜ್ಯದಲ್ಲಿ ಸಂಪುಟ ಪುನಾರಚನೆ ಕುರಿತ ಚರ್ಚೆ ಆರಂಭವಾಗಿದೆ ಎಂದು ಸುದ್ದಿಯಾಗಿತ್ತು.
    ಕಾಂಗ್ರೆಸ್‌ ಈ ಸಲ ಅಭ್ಯರ್ಥಿಗಳ ಕೊರತೆಯಿಂದ ಸಚಿವರ ಮಕ್ಕಳು ಮತ್ತು ಕುಟುಂಬ ಸದಸ್ಯರನ್ನು ಕಣಕ್ಕಿಳಿಸಿದ್ದು, ಪರಿವಾರ ರಾಜಕಾರಣದ ಆರೋಪದ ನಡುವೆಯೂ ಇದನ್ನೊಂದು ಪ್ರಯೋಗವಾಗಿ ಪಕ್ಷ ಸ್ವೀಕರಿಸಿತ್ತು. ಈ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ಆಯಾ ಸಚಿವರಿಗೆ ನೀಡಲಾಗಿದೆ. ಈ ಟಾಸ್ಕ್‌ನಲ್ಲಿ ವೈಫಲ್ಯ ಕಂಡರೆ ಕ್ರಮ ಕೈಗೊಳ್ಳುವ ಬಗ್ಗೆಯೂ ತಿಳಿಸಿತ್ತು
   ಇನ್ನು ಇದೇ ವೇಳೆ ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರಕಾರ ಜಾರಿ ಮಾಡಿರುವ ಐದು ಗ್ಯಾರೆಂಟಿಗಳು ರದ್ದಾಗಲಿವೆ ಎಂಬ ವರದಿಗಳನ್ನೂ ಅವರು ತಳ್ಳಿ ಹಾಕಿದ್ದಾರೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap