ನಮ್ಮ ಕುಟುಂಬವನ್ನು ಯಾರು ಖರೀದಿಸಲು ಸಾಧ್ಯವಿಲ್ಲ : ಕುಮಾರಸ್ವಾಮಿ

ಬೆಂಗಳೂರು:

       ದೇವೇಗೌಡರ ಕುಟುಂಬವನ್ನು ಯಾರು ಸಹ  ಖರೀದಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.

     ಯಶವಂತಪುರ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಯಾರಿಗೂ ಹೆದರುವುದಿಲ್ಲ, ದೆಹಲಿಯಲ್ಲಿ ಬಿಜೆಪಿ ನಾಯಕರನ್ನೂ ಖರೀದಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಹೇಳಿದರು.

    ಕಾಂಗ್ರೆಸ್ ಪಕ್ಷದ ವಿರುದ್ಧ 30 ಶಾಸಕರು ಬಂಡಾವೆದ್ದಿದ್ದು, ಪಕ್ಷ ತೊರೆಯಲು ನಿರ್ಧರಿಸಿದ್ದಾರೆ. ಈ ಅಂಶವನ್ನು ಮರೆಮಾಚಲು ಡಿಕೆ ಶಿವಕುಮರ್ ಅವರು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿಯೇ ಪಕ್ಷ ಬೇರೆ ಪಕ್ಷಗಳ ನಾಯಕರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆಂದು ತಿಳಿಸಿದರು.

 
   ನೈಸ್ ರಸ್ತೆಯ ಅಕ್ರಮಗಳ ಕುರಿತು ದಾಖಲೆಗಳನ್ನು ಬಿಡುಗಡೆ ವಿಚಾರ ಕುರಿತು ಮಾತನಾಡಿ, ನೈಸ್ ರಸ್ತೆ ಹಗರಣದ ದಾಖಲೆ ಬಿಡುಗಡೆಗೆ ಸಮಸ್ಯೆ ಇದೆ. ನಾಳೆ ಚಂದ್ರಯಾನ ಇದೆ. ಜನರ ಗಮನ ಚಂದ್ರನ ಕಡೆ ಇರುತ್ತದೆ. ಹೀಗಾಗಿ ನಾನು ದಾಖಲೆ ಬಿಡುಗಡೆ ಮಾಡಿದರೆ ಅದು ಜನರಿಗೆ ತಲುಪುದಿಲ್ಲ ಎಂದು ಹೇಳಿದರು.
    ದಾಖಲೆ ಬಿಡುಗಡೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಚಂದ್ರಯಾನ 3 ಕುರಿತು ನನಗೂ ಕುತೂಹಲವಿದೆ. ಹಾಗಾಗಿ ದಾಖಲೆಗಳ ಬಿಡುಗಡೆಯನ್ನು ಮುಂದೂಡಿದ್ದೇನೆ. ಈ ದಾಖಲೆಗಳನ್ನು ಶೀಘ್ರದಲ್ಲೇ ಮಾಡುತ್ತೇನೆ ಎಂದು ತಿಳಿಸಿದರು.ಬಳಿಕ ಕಾವೇರಿ ವಿಚಾರವಾಗಿ ಬುಧವಾರ ಸರ್ಕಾರ ಕರೆದಿರುವ ಸರ್ವಪಕ್ಷ ಸಭೆಗೆ ಹಾಜರಾಗುವುದಾಗಿ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap