ಯಾವೊಂದು ಸಮೀಕ್ಷೆಯೂ ಜೆಡಿಎಸ್‌ ಪರವಾಗಿಲ್ಲ : ಅಶೋಕ್

 ಹೆಚ್‌ ಡಿ ಕುಮಾರಸ್ವಾಮಿ ಸಮೀಕ್ಷೆ ಫಲಿತಾಂಶ ಕಂಡು ಹತಾಶರಾಗಿದ್ದಾರೆ

ಬೆಂಗಳೂರು:

     ವಿಧಾನಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಕ್ಕೆ ಜಯ ಸಿಗಲಿದೆ ಎಂದು ಇತ್ತೀಚಿನ ಯಾವುದೇ ಸಮೀಕ್ಷೆಗಳು ಭವಿಷ್ಯ ನುಡಿಯದ ಕಾರಣ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಹತಾಶೆಗೊಳಗಾಗಿದ್ದಾರೆಂದು ಬಿಜೆಪಿ ನಾಯಕ ಆರ್.ಅಶೋಕ್ ಅವರು ಬುಧವಾರ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದರೆ ಜೆಡಿಎಸ್‌ ಕುಟುಂಬ ಆಧಾರಿತ ಪಕ್ಷ. ನಮ್ಮಲ್ಲಿ ಮುಖ್ಯಮಂತ್ರಿ, ಪ್ರಧಾನಿ, ಸಚಿವರು ಆಗಬೇಕಾದರೆ ಪ್ರತಿಭೆಯನ್ನು ಗಮನಿಸಲಾಗುತ್ತದೆ. ಆದರೆ, ಜೆಡಿಎಸ್‌ನಲ್ಲಿ ಅದಕ್ಕೆ ಅವಕಾಶ ಇಲ್ಲ.

    ಕುಟುಂಬದಲ್ಲಿಯೇ ಯಾರಿಗೆ ಯಾವ ಸ್ಥಾನ ಎಂಬುದನ್ನು ತೀರ್ಮಾನಿಸಲಾಗಿದೆ. ಕಾಂಗ್ರೆಸ್‌, ಬಿಜೆಪಿ ಮತ್ತು ಮಾಧ್ಯಮಗಳ ಸಮೀಕ್ಷೆಗಳು ಜೆಡಿಎಸ್‌ 20 ಸ್ಥಾನಕ್ಕೆ ಸೀಮಿತ ಎನ್ನುತ್ತಿವೆ. ಆದರೆ, ಅವರು ಮಾತ್ರ 130 ಗುರಿ ಎನ್ನುತ್ತಾರೆ. ಅದು ಯಾವ ಪರಮಾತ್ಮನ ಸಮೀಕ್ಷೆಯೋ ಗೊತ್ತಿಲ್ಲ. ಮುಂದಿನ ಚುನಾವಣೆ ಬಳಿಕ ಸರ್ಕಾರ ರಚನೆ ವೇಳೆ ರಾಜಕೀಯ ಆಟವಾಡಬಹುದು ಎಂಬ ಭ್ರಮೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರಿದ್ದಾರೆ. ಈ ಹಿನ್ನೆಲೆಯಲ್ಲಿ ಮಾತಿನಲ್ಲಿ ಹಿಡಿತ ತಪ್ಪಿ ಹುಚ್ಚುಚ್ಚು ಹೇಳಿಕೆ ನೀಡುತ್ತಿದ್ದಾರೆ. ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap