ತುಮಕೂರು : ಆಂಬ್ಯುಲೆನ್ಸ್ ಡಿಕ್ಕಿಯಾಗಿ ವೃದ್ಧ ಸಾವು…..!

ತುಮಕೂರು

    ರಸ್ತೆ ದಾಟುತ್ತಿದ್ದ ವೃದ್ಧರೊಬ್ಬರಿಗೆ ಆಂಬ್ಯುಲೆನ್ಸ್ವೊಂದು ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಹೋಬಳಿಗೆ ಸೇರಿದ ವಿಠಲಾಪುರದಲ್ಲಿ ನಡೆದಿದೆ. ಮೃತ ವೃದ್ಧನನ್ನು ಮಾಸ್ತಯ್ಯ (65) ಎಂದು ಗುರುತಿಸಲಾಗಿದೆ.

    ಮಾಸ್ತಯ್ಯ ಅವರು ಮಾಯಸಂದ್ರ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಿAದ ರಸ್ತೆ ದಾಟಿ ಹೋಗುತ್ತಿದ್ದ ವೇಳೆ ತುರ್ತು ಚಿಕಿತ್ಸೆಗೆಂದು ತುರುವೇಕೆರೆ ಪಟ್ಟಣದಿಂದ ಆದಿಚುಂಚನಗಿರಿ ಆಸ್ಪತ್ರೆಗೆ ಕರೆ ತರುವಾಗ ಈ ಘಟನೆ ಸಂಭವಿಸಿದೆ. ತೀವ್ರ ಗಾಯಗೊಂಡ ಮಾಸ್ತಯ್ಯ ಅವರನ್ನು ಆಂಬ್ಯುಲೆನ್ಸ್ ಮೂಲಕ ಐಟಿಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಸದರಿ ವ್ಯಕ್ತಿ ಮೃತಪಟ್ಟಿರುತ್ತಾರೆ. ಈ ಬಗ್ಗೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap