ಬೆಂಗಳೂರಿನ ರಸ್ತೆಗೆ ಹುತಾತ್ಮಯೋಧ ಅಕ್ಷಯ್ ಕುಮಾರ್ ಹೆಸರು

 

ಬೆಂಗಳೂರು :
      ಬೆಂಗಳೂರು ನಗರದ ರಸ್ತೆಯೊಂದಕ್ಕೆ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಹೆಸರನ್ನು ನಾಮಕರಣ ಮಾಡಲಾಗಿದೆ.
     ಬೆಂಗಳೂರು ಯಲಹಂಕ ನ್ಯೂಟೌಟ್‍ನ ಎ ಸೆಕ್ಟರ್ 13ನೇ ಎ ಮುಖ್ಯರಸ್ತೆ, 3ನೇ ಎ ಅಡ್ಡರಸ್ತೆಯು ಇಂದಿನಿಂದ ಮೇಜರ್ ಅಕ್ಷಯ್ ಗಿರೀಶ್ ರಸ್ತೆ ಎನ್ನುವುದಾಗಿ ಕರೆಯಲ್ಪಡುತ್ತದೆ.
      ಬೆಂಗಳೂರಿನ ಯಲಹಂಕದವರಾಗಿದ್ದ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಭಾರತೀಯ ಸೇನೆ ಸೇರಿಕಾಶ್ಮೀರದ ಗಡಿಯಲ್ಲಿ ಉಗ್ರರೊಡನೆ ಹೋರಾಡುತ್ತಾ 2016ರ ನವೆಂಬರ್‍ನಲ್ಲಿ ಹುತಾತ್ಮರಾಗಿದ್ದರು. 
Related image
      ಈ ಕುರಿತು  “ವಿಜಯ್ ದಿವಸ್ ಆದ ಈ ದಿನ ಕರ್ನಾಟಕದ ಹೆಮ್ಮೆಯ ಸೈನಿಕ ಬೆಂಗಳೂರಿನ ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರನ್ನು ನಗರದ ಪಶ್ಚಿಮ ವಿಭಾಗದ ರಸ್ತೆಗೆ ನಾಮಕರಣ ಮಾಡುತ್ತಿದ್ದೇವೆ.ಅಕ್ಷಯ್ ಗಿರೀಶ್ ನಾಗ್ರೋಟಾದಲ್ಲಿ ಉಗ್ರಗಾಮಿಗಳೊಂದಿಗೆ ಹೋರಾಡಿ ಹುತಾತ್ಮರಾಗಿದ್ದಾರೆ.” ಪರಮೇಶ್ವರ್ ಟ್ವೀಟ್ ಮಾಡಿದ್ದಾರೆ.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap