ಕೇಂದ್ರದಿಂದ ಸಬ್ಸಿಡಿ ದರದಲ್ಲಿ ಈರುಳ್ಳಿ….!

ವದೆಹಲಿ

    ದೇಶದಾದ್ಯಂತ ಈರುಳ್ಳಿ ದರ ಏರಿಕೆ ಕಾಣುತ್ತಿದೆ. ಜನರಿಗೆ ಹೊರೆ ಆಗುವುದನ್ನು ತಪ್ಪಿಸಲು ತನ್ನ ಬಳಿ ಇರುವ ಹೆಚ್ಚುವರಿ ದಾಸ್ತಾನಿನಿಂದ ಕೆ.ಜಿ ಈರುಳ್ಳಿಗೆ ₹25ರಂತೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

    ಯಾವ ರಾಜ್ಯಗಳಲ್ಲಿ ಈರುಳ್ಳಿ ದರ ಭಾರಿ ಏರಿಕೆ ಕಂಡಿದೆಯೋ ಅಲ್ಲೆಲ್ಲಾ ಕೇಂದ್ರದ ಬಳಿ ಇರುವ ಹೆಚ್ಚುವರಿ ದಾಸ್ತಾನನ್ನು ಮಾರಾಟ ಮಾಡಲಾಗುವುದು.

    ಎನ್‌ಸಿಸಿಎಫ್‌ ಮತ್ತು ನಾಫೆಡ್‌ ಮೂಲಕ ರಿಯಾಯಿತಿ ದರದಲ್ಲಿ ರಿಟೇಲ್‌ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುವುದು ಎಂದು ಗ್ರಾಹಕರ ವ್ಯವಹಾರಗಳ ಸಚಿವಾಲಯವು ಶುಕ್ರವಾರ ತಿಳಿಸಿದೆ.

    ದೇಶದಾದ್ಯಂತ ಈರುಳ್ಳಿಯ ರಿಟೇಲ್‌ ದರವು ಕೆ.ಜಿಗೆ ಸರಾಸರಿ ₹47ಕ್ಕೆ ತಲುಪಿದೆ. ಕಳೆದ ವರ್ಷ ಕೆ.ಜಿಗೆ ₹30 ಇತ್ತು. ಇದಕ್ಕೆ ಹೋಲಿಸಿದರೆ ಶೇ 57ರಷ್ಟು ಹೆಚ್ಚಾಗಿದೆ ಎಂದು ಸಚಿವಾಲಯ ಹೇಳಿದೆ. ದೆಹಲಿಯಲ್ಲಿ ಶುಕ್ರವಾರ ಕೆ.ಜಿಗೆ ₹40ರಂತೆ ಮಾರಾಟ ಆಗಿದೆ. ಕಳೆದ ವರ್ಷ ಕೆ.ಜಿಗೆ ₹30 ಇತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap