ಪತ್ನಿಯ ಅನೈತಿಕ ಸಂಬಂಧ; ಬೇಸತ್ತು ನಡುರಸ್ತೆಯಲ್ಲೇ ಚೂರಿ ಇರಿದು ಹತ್ಯೆಗೈದ ಪತಿ!

ಬೆಂಗಳೂರು:

    ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತಿಯೊಬ್ಬ ನಡುರಸ್ತೆಯಲ್ಲೇ ಪತ್ನಿಗೆ ಏಳೆಂಟು ಬಾರಿ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆನೇಕಲ್ ನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.

    ಇಂದು ಬೆಳಗ್ಗೆ ತನ್ನ ಆರು ವರ್ಷದ ಮಗನನ್ನು ಶಾಲೆಗೆ ಬಿಡಲು ಬಂದಿದ್ದ 29 ವರ್ಷದ ಶ್ರೀಗಂಗಾಗೆ ಪತಿ 32 ವರ್ಷದ ಮೋಹನ್ ರಾಜ್ ರಸ್ತೆ ಮಧ್ಯೆ ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಂದಿದ್ದಾನೆ. ದಂಪತಿಗೆ 7 ವರ್ಷಗಳ ಹಿಂದೆ ಮದುವೆಯಾಗಿತ್ತು. ಆದರೆ ಶ್ರೀಗಂಗಾ ತನ್ನ ಸ್ನೇಹಿತನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ ಎಂಬ ಶಂಕೆಯಿಂದಾಗಿ ಮೋಹನ್ ರಾಜ್ ಪದೇ ಪದೇ ಜಗಳವಾಡುತ್ತಿದ್ದನು. ಹೀಗಾಗಿ ಶ್ರೀಗಂಗೆ 8 ತಿಂಗಳಿನಿಂದ ಪತಿಯಿಂದ ದೂರವಾಗಿದ್ದಳು. ಆದರೆ ನಿನ್ನೆ ರಾತ್ರಿ ಮೋಹನ್ ರಾಜ್‌ ತನ್ನ ಮಗುವನ್ನ ನೋಡಲು ಮನೆಗೆ ಬಂದಿದ್ದ. ಆಗ ಕೂಡ ಇಬ್ಬರ ಮಧ್ಯೆ ಜಗಳವಾಗಿತ್ತು.

Recent Articles

spot_img

Related Stories

Share via
Copy link