ವಿವಾದಗಳನ್ನು ಪರಿಹರಿಸಲು ಸಿದ್ಧ ; ಶಾಂತಿ ಮಂತ್ರ ಪಠಿಸಿದ ಪಾಕ್‌ ಪ್ರಧಾನಿ!

ಟೆಹರಾನ್:

    ಪಾಕಿಸ್ತಾನ ಹಾಗೂ ಭಾರತದ ನಡುವೆ ಇರುವ ಉದ್ವಿಗ್ನತೆ ಕೊಂಚ ಮಟ್ಟಿಗೆ ತಣ್ಣಗಾಗಿದೆ. ಇದೀಗ ಕಾಶ್ಮೀರ, ಭಯೋತ್ಪಾದನೆ, ನೀರು ಹಂಚಿಕೆ ಮತ್ತು ವ್ಯಾಪಾರ ಸೇರಿದಂತೆ ಎರಡು ನೆರೆಯ ರಾಷ್ಟ್ರಗಳ ನಡುವಿನ ಎಲ್ಲಾ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಲು ಭಾರತದೊಂದಿಗೆ ಶಾಂತಿ ಮಾತುಕತೆಯಲ್ಲಿ ತೊಡಗಿಸಿಕೊಳ್ಳಲು ಪಾಕಿಸ್ತಾನ ಸಿದ್ಧವಿದೆ ಎಂಬ ಅಚ್ವರಿಯ ಹೇಳಿಕೆಯನ್ನು ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಸೋಮವಾರ ಹೇಳಿದ್ದಾರೆ. ಭಾರತದ ಸರ್ವ ಪಕ್ಷ ನಿಯೋಗ ವಿವಿಧ ದೇಶಗಳಿಗೆ ತೆರಳಿ ಭಯೋತ್ಪಾದನೆ ವಿರುದ್ಧ ಜಾಗತಿಕ ಅಭಿಯಾನ ನಡೆಸುತ್ತಿರುವಾಗಲೇ ಪಾಕ್‌ ಪ್ರಧಾನಿಯಿಂದ ಈ ಹೇಳಿಕೆ ಬಂದಿದೆ.

   ಕಾಶ್ಮೀರ ಸಮಸ್ಯೆ ಮತ್ತು ನೀರಿನ ಸಮಸ್ಯೆ ಸೇರಿದಂತೆ ಎಲ್ಲಾ ವಿವಾದಗಳನ್ನು ಮಾತುಕತೆಗಳ ಮೂಲಕ ಪರಿಹರಿಸಲು ನಾವು ಬಯಸುತ್ತೇವೆ ಮತ್ತು ವ್ಯಾಪಾರ ಮತ್ತು ಭಯೋತ್ಪಾದನೆ ನಿಗ್ರಹದ ಬಗ್ಗೆ ಪಾಕ್‌ ಪ್ರಧಾನಿ ಮಾತನಾಡಿದ್ದಾರೆ. ಆಪರೇಷನ್‌ ಸಿಂದೂರದ ಮೂಲಕ ನಡೆಸಿದ ಮಿಲಿಟರಿ ದಾಳಿ ಬಳಿಕ ಪಾಕಿಸ್ತಾನ ಬೆಚ್ಚಿ ಬಿದ್ದಿದೆ. ಪ್ರಧಾನಿ ಮೋದಿ ಪಾಕಿಸ್ತಾನದೊಂದಿಗಿನ ಯಾವುದೇ ಮಾತುಕತೆ ಸಾಧ್ಯವಿಲ್ಲ ಎಂದು ಹೇಳಿದ್ದರು. ಪಾಕ್ ಆಕ್ರಮಿತ ಕಾಶ್ಮೀರ ನಮಗೆ ಮರಳಿಸುವವರೆಗೂ ನಾವು ಯಾವುದೇ ರೀತಿಯಲ್ಲಿಯೂ ಸಂಧಾನಕ್ಕೆ ಬರುವುದಿಲ್ಲ ಎಂದು ಸರ್ಕಾರ ಹೇಳಿತ್ತು.

   ಭಯೋತ್ಪಾದನೆ ಮತ್ತು ಮಾತುಕತೆ ಒಂದೇ ಸಮಯದಲ್ಲಿ ನಡೆಯಲು ಸಾಧ್ಯವಿಲ್ಲ. ಭಯೋತ್ಪಾದನೆ ಮತ್ತು ವ್ಯಾಪಾರ ನಡೆಯಲು ಸಾಧ್ಯವಿಲ್ಲ. ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ. ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಅದು ಭಯೋತ್ಪಾದನೆ ಮತ್ತು ಪಿಒಕೆ ಬಗ್ಗೆ ಮಾತ್ರ ಎಂದು ನಾನು ಅಂತರರಾಷ್ಟ್ರೀಯ ಸಮುದಾಯಕ್ಕೆ ಹೇಳಲು ಬಯಸುತ್ತೇನೆ ಎಂದು ಮೋದಿ ಹೇಳಿದ್ದರು. 

   ಇದೀಗ ಪಾಕಿಸ್ತಾನ ಪ್ರಧಾನಿ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುವಾಗ ಭಾರತದ ಜೊತೆಗೆ ಮಾತುಕತೆಗೆ ತಯಾರಿದೆ ಎಂದು ಹೇಳಿದ್ದಾರೆ. ನಾವು ಶಾಂತಿಯನ್ನು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ.

Recent Articles

spot_img

Related Stories

Share via
Copy link