ಪಾವಗಡ :
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ದ ಜುಲೈ 12 ರಂದು ಪಾವಗಡ ತಾ. ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮಾಂತರ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹಾಗೂ ಜಿಪಂ ಸದಸ್ಯ ಎಚ್.ವಿ. ವೆಂಕಟೇಶ್ ತಿಳಿಸಿದರು.
ಅವರು ಶುಕ್ರವಾರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿನ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದರು. ಬೆಲೆ ಏರಿಕೆಯ ಬಗ್ಗೆ ಈಗಾಗಲೆ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಗಿದೆ. ಆದರೆ ಪ್ರಧಾನಿ ಮೋದಿ ಇದಕ್ಕೆ ಕಿವಿಗೊಟ್ಟಿಲ್ಲ. ಆದ್ದರಿಂದ ಮತ್ತೊಮ್ಮೆ ರಾಜ್ಯದಾದ್ಯಂತ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂತೆಯೆ ಅಂದು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಜೊತೆಗೆ ತಾಲ್ಲೂಕಿನಲ್ಲಿ ಕೊರೋನಾದಿಂದ ಮೃತಪಟ್ಟಿರುವ ಕುಟುಂಬಗಳಿಗೆ ನನ್ನ ವೈಯಕ್ತಿಕ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಆರ್ಥಿಕ ಸಹಾಯ ಮಾಡಲಾಗುವುದು ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸುದೇಶ್ ಬಾಬು ಮಾತನಾಡಿ, ಪ್ರತಿಭಟನೆಯಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ ವೆಂಟರವಣಪ್ಪ, ಕೆ.ಪಿ.ಸಿ.ಸಿ. ವೀಕ್ಷಕರಾದ ಪ್ರೊ. ರಾಧಾಕೃಷ್ಣ, ಕೆ.ಪಿ.ಸಿ.ಸಿ.ಯ ಶಫಿಉಲ್ಲಾ, ಅಲ್ಲಮಪ್ರಭು ಪಾಟೀಲ್, ಗೌರಿಬಿದನೂರಿನ ಮಾಜಿ ಶಾಸಕ ಶಿವಶಂಕರರೆಡ್ಡಿ, ಮಾಜಿ ಶಾಸಕ ಸೋಮ್ಲಾನಾಯ್ಕ, ಪುರಸಭಾ ಸದಸ್ಯರುಗಳು, ಜಿ.ಪಂ., ತಾ.ಪಂ.ನ ಮಾಜಿ ಸದಸ್ಯರುಗಳು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಪುರಸಭಾದ್ಯಕ್ಷ ರಾಮಾಂಜಿನಪ್ಪ, ಪುರಸಭಾ ಸದಸ್ಯರಾದ ಪಿ.ಎಚ್.ರಾಜೇಶ್, ಟೆಂಕಾಯಲ ರವಿ, ನಾಗಭೂಷಣರೆಡ್ಡಿ, ವೇಲ್ರಾಜ್, ಬಾಲಸುಬ್ರಹ್ಮಣಿ, ನಗರಯುವ ಘಟಕದ ಅಧ್ಯಕ್ಷ ಮಹೇಶ್, ಮುಖಂಡರಾದ ಸ್ಟುಡಿಯೊ ಅಮರ್ನಾಥ್, ಅಲ್ಪಸಂಖ್ಯಾತ ಜಿಲ್ಲಾ ಉಪಾಧ್ಯಕ್ಷ ಷಾ. ಬಾಬು, ಆಲಿ, ವಿ.ಎಚ್.ಪಾಳ್ಯ ಪಾಪಣ್ಣ, ಕನಿಕಲಬಂಡೆ ಅನಿಲ್ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
