ಬಿಜೆಪಿ ಅಭಿವೃದ್ಧಿ ಕಾರ್ಡ್ ಗೆ ಜನಬೆಂಬಲ: ಯಡಿಯೂರಪ್ಪ

ಬೆಂಗಳೂರು:

    ಬಿಜೆಪಿಯ ಅಭಿವೃದ್ಧಿ ಕಾರ್ಡ್ ನೋಡಿ ಕಾರ್ಯಕರ್ತರು ಮತ್ತು ಜನರು ವಿಜಯ ಸಂಕಲ್ಪ ಯಾತ್ರೆಯನ್ನು ಸಾಗರೋಪಾದಿಯಲ್ಲಿ ಸ್ವಾಗತಿಸುತ್ತಿದ್ದಾರೆ. ಬಿಜೆಪಿ ಬರುವ ಚುನಾವಣೆಯಲ್ಲಿ ಜಯಭೇರಿ ಬಾರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಅವರು ಹೇಳಿದರು. ತೇರದಾಳ ಮತಕ್ಷೇತ್ರದ ಬನಹಟ್ಟಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಗೆಲುವಿಗೆ ಶ್ರಮಿಸುವೆ ಎಂದು ತಿಳಿಸಿದರು.

   ಬಿಜೆಪಿಗೆ ಎಲ್ಲೆಡೆ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು. ತೇರದಾಳ ಕ್ಷೇತ್ರ ಸೇರಿದಂತೆ ಈ ಭಾಗದ ಎಲ್ಲ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಡಬಲ್ ಎಂಜಿನ್ ಸರಕಾರದ ಸಾಧನೆಗಳನ್ನು ಜನರಿಗೆ ತಿಳಿಸುವಂತೆ ಅವರು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು. ಎಲ್ಲರೂ ಜೊತೆಗೂಡಿ ಚುನಾವಣೆ ಎದುರಿಸುತ್ತೇವೆ ಎಂದ ಅವರು, ಬಿಜೆಪಿ ಗೆಲುವು ಶತಸ್ಸಿದ್ಧ ಎಂದು ನುಡಿದರು.

   ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ನಾಯಕ ಎನಿಸಿಕೊಂಡಿರುವ ರಾಹುಲ್ ಗಾಂಧಿ, ವಿಶ್ವವಂದ್ಯ ನಾಯಕ ಮೋದಿಜಿ, ಅಮಿತಾ ಶಾ ಅವರಿಗೆ ಹೋಲಿಕೆಯಾಗುವುದಿಲ್ಲ. ಅಪ್ರಬುದ್ಧತೆಯಿಂದ ವಿದೇಶದಲ್ಲಿ ನಮ್ಮ ರಾಷ್ಟçದ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಟೀಕಿಸಿದ್ದು ಅವರ ದಿವಾಳಿತನವನ್ನು ತೋರಿಸುತ್ತದೆ ಎಂದು ಆಕ್ಷೇಪಿಸಿದರು. ಟೀಕೆ ಮಾಡುವದನ್ನೇ ಬಂಡವಾಳ ಮಾಡಿಕೊಂಡ ಅವರಿಗೆ ಜನರೇ ಬುದ್ಧಿ ಕಲಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಚಿವ ಮುರುಗೇಶ ನಿರಾಣಿ ಜಿಲ್ಲಾ ಅಧ್ಯಕ್ಷ ಶಾಂತನಗೌಡ ಪಾಟೀಲ, ಯಾತ್ರೆಯ ಸಂಚಾಲಕ ಅರುಣ ಶಾಹಾಪೂರ, ವಿಧಾನ ಪರಿಷತ್ತು ಸದಸ್ಯ ಹಣಮಂತ ನಿರಾಣಿ ಇದ್ದರು.

    ಯಡಿಯೂರಪ್ಪನವರಿಗೆ ಭರ್ಜರಿ ಸ್ವಾಗತ ತೇರದಾಳ ಮತಕ್ಷೇತ್ರದ ಬನಹಟ್ಟಿ, ರಬಕವಿ, ತೇರದಾಳ, ಮತ್ತು ಮಹಾಲಿಂಗಪುರದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಬಿ.ಎಸ್.ಯಡಿಯೂರಪ್ಪ ಅವರು ಆಗಮಿಸುತ್ತಿದ್ದಂತೆ ಕ್ಷೇತ್ರದ ಜನತೆ ಹೂ ಹಾರ ಹಿಡಿದು ರಥದ ಮೇಲೆ ಪುಷ್ಪ ವೃಷ್ಟಿ ಮಾಡಿ, ಪೂರ್ಣ ಕುಂಭ ಮೇಳದೊಂದಿಗೆ ಭರ್ಜರಿ ಸ್ವಾಗತ ಕೋರಿದರು.

    ಸಾವಿರಾರು ಯುವಕರು ದ್ವಿ ಚಕ್ರ ವಾಹನದಲ್ಲಿ ಜೊತೆಗೂಡಿದರು. ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯ ಸಂಕಲ್ಪ ಯಾತ್ರೆಯ ರಥ ಚಲಿಸುವ ಮಾರ್ಗುದುದ್ದಕ್ಕೂ ಬಿಜೆಪಿ ಧ್ವಜ ಬೀಸುತ್ತಾ ಜೈಕಾರ ಹಾಕಿ ಯಾತ್ರೆ ಅದ್ಧೂರಿಯಾಗಿ ಸಾಗಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap