ಪೊಲೀಸ್‌ ಪೇದೆ ಕೈ ಕಚ್ಚಿದವ ಬಂಧನ….!

ಬೆಂಗಳೂರು:

     ಬಿಟಿಎಂ ಲೇಔಟ್ 1ನೇ ಹಂತದ ನಿವಾಸಿ ಸೈಯದ್ ಶಫಿ ಎಂಬಾತ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ, ಈ ವೇಳೆ ಕಾನ್‌ಸ್ಟೆಬಲ್ ಸಿದ್ದರಾಮೇಶ್ವರ ಕೌಜಲಗಿ ಆತನ ಫೋಟೊ ತೆಗೆಯುತ್ತಿದ್ದರು. ಇದನ್ನು ಕಂಡು ಆಕ್ರೋಶಗೊಂಡ ಆರೋಪಿ ಅವರ  ಕೈ ಬೆರಳಪ ಕಚ್ಚಿದ್ದಾನೆ. ಜೊತೆಗೆ ಕಾನ್‌ಸ್ಟೆಬಲ್‌ನ ಮೊಬೈಲ್‌ ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಹೆಡ್ ಕಾನ್‌ಸ್ಟೆಬಲ್ ತಮ್ಮ ಸಹೋದ್ಯೋಗಿಯೊಂದಿಗೆ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

    ಹೆಲ್ಮೆಟ್ ಹಾಕದೇ ವಾಹನ ಚಲಾಯಿಸಿದ್ದನ್ನು ಮೊಬೈಲ್​ನಲ್ಲಿ ಫೋಟೋ ತೆಗೆದಿದ್ದಕ್ಕೆ ಕೋಪಗೊಂಡ ವಾಹನ ಸವಾರ ಟ್ರಾಫಿಕ್​ ಕಾನ್​ಸ್ಟೆಬಲ್​ ಕೈ ಬೆರಳು ಕಚ್ಚಿ ಗಾಯಗೊಳಿಸಿರುವ ಘಟನೆ ನಗರದಲ್ಲಿ ನಡೆದಿದೆ.  ವಿಲ್ಸನ್ ಗಾರ್ಡನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನ ಸವಾರನನ್ನು ಬಂಧಿಸಿದ್ದಾರೆ.   

    ದ್ವಿಚಕ್ರ ವಾಹನವನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪಿ ಶಫಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದಾನೆ . ನಂಬರ್ ಪ್ಲೇಟ್​ ಬಿಚ್ಚಿಕೊಡುತ್ತೇನೆ, ಎಷ್ಟು ಕೇಸ್ ಹಾಕೊಳ್ತೀಯಾ ಹಾಕ್ಕೋ ಎಂದು ಏಕವಚನದಲ್ಲೇ ನಿಂದಿಸಿ ಕಾನ್​ಸ್ಟೆಬಲ್ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾನೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap