ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಶ್ರೀಮತಿ ಪೆರುಗು ಶ್ರೀ ಸುಧಾ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು :

    ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಶ್ರೀಮತಿ ಪೆರುಗು ಶ್ರೀ ಸುಧಾ ಅವರು ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜಭವನದ ಬ್ಯಾಂಕ್ವಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಭೋದಿಸಿದರು.

    ಈ ಸಮಯದಲ್ಲಿ  ಮುಖ್ಯಮಂತ್ರಿ  ಸಿದ್ದರಾಮಯ್ಯ,  ಕರ್ನಾಟಕ ಉಚ್ಛನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಾಧೀಶರಾದ ವಿ. ಕಾಮೇಶ್ವರ ರಾವ್,  ಇಂದನ ಇಲಾಖೆಯ ಸಚಿವರಾದ ಕೆ.ಜೆ. ಜಾರ್ಜ್,  ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಸತ್ಯವತಿ ಜಿ, ಕರ್ನಾಟಕ ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳು, ವಕೀಲರು ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Recent Articles

spot_img

Related Stories

Share via
Copy link