ಪಿ.ಎಂ.ಕಿಸಾನ್: ಫಲಾನುಭವಿಗಳಿಗೆ ಇ-ಕೆವೈಸಿ ಕಡ್ಡಾಯ, ಮಾರ್ಚ್ 31 ರವರೆಗೂ ಗಡುವು

ಚಿತ್ರದುರ್ಗ:

       ಕೇಂದ್ರ ಸರ್ಕಾರದಿಂದ ರೈತರಿಗೆ ಪಿ.ಎಂ.ಕಿಸಾನ್ (PM KISAN) ಯೋಜನೆಯಡಿ ನೋಂದಾಯಿತ ಆರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ಜಮೆ ಆಗುತ್ತಿದೆ.

ಈ ಸಂಬಂಧ ಆರ್ಹ ಫಲಾನುಭವಿಗಳಿಗೆ ಕಡ್ಡಾಯವಾಗಿ ಇ-ಕೆ.ವೈ.ಸಿ ಮಾಡಿಕೊಳ್ಳಲು ಕೃಷಿ ಇಲಾಖೆ ಸಮಸ್ತ ರೈತಭಾಂದವರಲ್ಲಿ ಕೋರಲಾಗಿದೆ.

   ಪ್ರತಿಯೊಬ್ಬ ರೈತ ಫಲಾನುಭವಿಯು https://pmkisan.gov.inWebsite ಗೆ ಬೇಟಿ ನೀಡಿ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ನಮೂದಿಸಿ ಉಚಿತವಾಗಿ ಇ-ಕೆ.ವೈ.ಸಿ ಮಾಡಿಕೊಳ್ಳಬಹುದು.

ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ನೋದಾವಣೆಯಾಗದ ರೈತರು ಅಥವಾ ಓಟಿಪಿ ಸೃಜನೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ (CSC -Citizen Service Center) ಬೇಟಿ ನೀಡಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳಚ್ಚು ನಮೂದಿಸಿ ಇ-ಕೆ.ವೈ.ಸಿ ಮಾಡಿಸಿಕೊಳ್ಳಬಹುದು .ಈಪ್ರಕಿಯೆಗಾಗಿ ಸಾಮಾನ್ಯ ಸೇವಾ ಕೇಂದ್ರದವರಿಗೆ ಶುಲ್ಕ ಪಾವತಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರನ್ನು ಬೇಟಿ ನೀಡಬೇಕೆಂದು ಹಾಗೂ ಇ-ಕೆ.ವೈ.ಸಿ ಅಪ್‍ಡೇಟ್ ಮಾಡಲು 2022ರ ಮಾಚ್-31 ಕೊನೆಯ ದಿನಾಂಕವಾಗಿರುತ್ತೆಂದು ಚಿತ್ರದುರ್ಗ ಕೃಷಿ ಇಲಾಖೆ ಉಪ ಕೃಷಿ ನಿರ್ದೇಶಕರು ಹೆಚ್ ಹುಲಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link