ಬಿಬಿಎಂಪಿ ತ್ಯಾಜ್ಯ ಸಂಸ್ಕರಣೆ ಮೇಲು ರಾಜಕೀಯದ ವಕ್ರ ದೃಷ್ಠಿ..!

ಬೆಂಗಳೂರು

    ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗ ದುರ್ವಾಸನೆ ಬೀರುವ ಹಾಗೂ ಅಂತರ್ಜಲವನ್ನು ಕಲುಷಿತಗೊಳಿಸುವ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಮುಚ್ಚುವಂತೆ ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳಿಂದ ಬಿಬಿಎಂಪಿ ಮೇಲೆ ಒತ್ತಡ ಹೆಚ್ಚುತ್ತಿದೆ.

    ನಗರದಲ್ಲಿ ಉತ್ಪತ್ತಿಯಾಗುವ ಒಟ್ಟು ತ್ಯಾಜ್ಯದ ಕೇವಲ 20% ನಷ್ಟು ಭಾಗವನ್ನು ಬಿಬಿಎಂಪಿ ಸಂಸ್ಕರಿಸುತ್ತದೆಯಾದರೂ, ಕೆಲವು ಘಟಕಗಳನ್ನು ಮುಚ್ಚುವುದರಿಂದ ಹೆಚ್ಚಿನ ಪರಿಣಾಮಗಳು ಉಂಟಾಗುತ್ತವೆ ಎಂದು ಡಿಎಚ್‌ ವರದಿ ಮಾಡಿದೆ.

     ಸ್ಥಳೀಯ ಶಾಸಕ ಹಾಗೂ ರಾಜ್ಯ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರ ಮನವಿ ಮೇರೆಗೆ ಸ್ಥಾವರವನ್ನು ಮುಚ್ಚುವಂತೆ ಅಥವಾ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಆದೇಶಿಸಿದ ಹಿನ್ನೆಲೆಯಲ್ಲಿ ಲಿಂಗಧೀರನ ಹಳ್ಳಿಯಲ್ಲಿರುವ ಸ್ಥಾವರವನ್ನು ಮುಚ್ಚುವ ಸಾಧ್ಯತೆಯಿದೆ. ಈ ಘಟಕವು ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link