ಚಿಕ್ಕಬಳ್ಳಾಪುರ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ ನೂತನವಾಗಿ ರಚನೆಯಾಗಿರುವ ಜಿಲ್ಲೆಯ ಚೇಳೂರು ಮತ್ತು ಮಂಚೇನಹಳ್ಳಿ ತಾಲ್ಲೂಕು ಆಡಳಿತಗಳ ಕಟ್ಟಡವಾದ ಪ್ರಜಾಸೌಧ ಕಟ್ಟಡಗಳ ನಿರ್ಮಾಣಕ್ಕೆ ಮಂಜೂರಾತಿ ಪತ್ರ ವನ್ನು ಮಾನ್ಯ ಜಿಲ್ಲಾಧಿಕಾರಿಗಳು ಸ್ವೀಕರಿಸಿದರು. ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಮಾವೇಶ ಕಾರ್ಯಕ್ರಮದಲ್ಲಿ ವಿತರಿಸ ಲಾಯಿತು. ಈವರೆಗೆ ಇದ್ದ ತಾಲ್ಲೂಕು ಆಡಳಿತ ಸೌಧ ಎಂಬ ಹೆಸರನ್ನು ತಾಲ್ಲೂಕು ಪ್ರಜಾಸೌಧ ಎಂದು ಬದಲಾವಣೆ ಮಾಡಲಾಯಿತು.
