ನಾಯಕನಹಟ್ಟಿ :
ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ನಡೆಸಿದ್ದರು ಪೂರ್ಣವಾಗದ ರಸ್ತೆ ಕಾಮಗಾರಿ ಶೀಘ್ರ ಮೆಲ್ಸೇತುವೆ ಕಾಮಗಾರಿ ಆರಂಭಿಸಿ ಎಂಬ ತಲೆ ಬರಹದಡಿಯಲ್ಲಿ ಪ್ರಜಾಪ್ರಗತಿ ಸುದ್ಧಿ ಪ್ರಕಟಿಸಿದ ಬೆನ್ನಲೆ ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಮೇಲ್ಸೇತುವೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು ಸತತವಾಗಿ ೭ ಬಾರಿ ಶಾಸಕನಾಗಿದ್ದೇನೆ ನನಗೆ ಹಿಂದೆ ಬಂದವರು ಮಂತ್ರಿಗಳಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಹಲವರಿಗೆ ಸಚಿವ ಸ್ಥಾನ ನೀಡಲಾಗಿದೆ ಆದರೆ ಹಿರಿಯನಿದ್ದೇನೆ ೭ ಬಾರಿ ಗೆದ್ದರೂ ಸಚಿವ ಸ್ಥಾನ ನೀಡಲಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಬಳ್ಳಾರಿ ಹಾಗೂ ಚಿತ್ರದುರ್ಗ ಮತ್ತು ಕೂಡ್ಲಿಗಿ ಕ್ಷೇತ್ರದಲ್ಲಿ ಮತದಾರರ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ, ನನ್ನ ಮೇಲೆ ಭರವಸೆ ಇಟ್ಟು ಶಾಸಕನಾಗಿ ಆಯ್ಕೆ ಮಾಡಿದ್ದಾರೆ ಹಿಂದೆ ಇದ್ದ ಸಂದರ್ಭದಲ್ಲಿ ೩ ಬಾರಿ ಗೆದ್ದರೆ ಸಚಿವ ಸ್ಥಾನ ನೀಡಬೇಕಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಆ ಪದ್ಧತಿಗಳು ಮಾಯವಾಗಿವೆ.
ಉಪಚುನಾವಣೆಯಲ್ಲಿ ಗೆಲವು ಸಾಧಿಸಿದ್ದೇನೆ. ಹೈಕಮಾಂಡ್ ಸಚಿವಸ್ಥಾನ ಕೊಟ್ಟರೆ ನಿಭಾಯಿಸುವ ಶಕ್ತಿ ನನ್ನಲ್ಲಿ ಇದೆ. ಇದನ್ನು ಮನಗಂಡು ವರಿಷ್ಟರು ತೀರ್ಮಾನ ತೆಗೆದುಕೊಳ್ಳಬೇಕು. ಸಚಿವ ಸ್ಥಾನ ನೀಡಿದರೆ ಕ್ಷೇತ್ರದಲ್ಲಿ ಇನ್ನು ಹೆಚ್ಚು ಕೆಲಸಗಳನ್ನು ಮಾಡಲು ಸಹಕಾರಿಯಾಗಲಿದೆ. ಜನಗಳ ಆಶೀರ್ವಾದದಿಂದ ಪ್ರತಿ ಬಾರಿ ಗೆಲುವು ಸಾಧಿಸಿದ್ದೇನೆ. ನನ್ನಲ್ಲಿರುವ ಬುದ್ಧಿವಂತಿಕೆ, ಅನುಭವವನ್ನು ಉಪಯೋಗಿಸಿ ಈ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇನೆ. ಕ್ಷೇತ್ರದ ಮತದಾರರ ಅಭಿಪ್ರಾಯ ಕೂಡ ಇದೇ ರೀತಿ ಇರುತ್ತದೆ. ಕ್ಷೇತ್ರದ ಮತದಾರರು ಶಾಸಕನಾಗಿ ನೋಡಿದ್ದಾರೆ ಒಂದು ಬಾರಿ ಸಚಿವನಾಗಿ ನೋಡಬೇಕು ಎಂದು ಬಯಸುತ್ತಿದ್ದಾರೆ. ಸಚಿವನಾಗಲು ನನಗೆ ಅರ್ಹತೆ ಇದೆ. ಆದ್ದರಿಂದ ಸಚಿವ ಸ್ಥಾನ ನೀಡಲು ವರಿಷ್ಟರು ತೀರ್ಮಾನ ತೆಗೆದುಕೊಳ್ಳುವುದು ಸೂಕ್ತ ಎಂದು ಹೇಳಿದರು.
ಕರ್ನಾಟಕ ರಾಜ್ಯದ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡುತ್ತೇನೆಂದು ಭರವಸೆಯಿಂದ ಮಾತನಾಡಿದರು. ಶ್ರೀಗುರು ತಿಪ್ಪೇರುದ್ರಸ್ವಾಮಿ ಕ್ಷೇತ್ರದ ಚಿಕ್ಕಕೆರೆ ಕೋಡಿ ನೀರು ಹರಿಯುವ ಜಗಳೂರು ರಸ್ತೆ, ಬೋಸೆದೇವರಹಟ್ಟಿ-ಮಾಳಪ್ಪನಹಟ್ಟಿಗೆ ಹೋಗುವ ರಸ್ತೆ ಎರಡು ಮೇಲು ಸೇತುವೆಗಳನ್ನು ಹಂತ-ಹAತವಾಗಿ ಕಾಮಗಾರಿ ಮಾಡಿಸುತ್ತೇನೆ ಎಂದು ಭರವಸೆ ನೀಡಿದರು.
ಚಳ್ಳಕೆರೆ ಅರಭಾವಿ ರಸ್ತೆಯಲ್ಲಿ ಬರುವ ಮನಮೈನಹಟ್ಟಿ ಕೆರೆ ಕೋಡಿ ನೀರು ಹರಿಯುವ ಸ್ಥಳದಲ್ಲಿ ಮೇಲ್ಸೇತುವೆಗೆ ಜಿಲ್ಲಾ ಖನಿಜ ನಿಧಿಯ ಮೂಲಕ ಸುಮಾರು ೨ ಕೋಟಿ ವೆಚ್ಚದಲ್ಲಿ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಿದರು. ನಂತರ ಸಣ್ಣ ನೀರಾವರಿ ಇಲಾಖೆ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ ಬೋಸೆದೇವರಹಟ್ಟಿ ಗ್ರಾಮದ ಹತ್ತಿರ ಶಿಡ್ಲೆಹಳ್ಳಕ್ಕೆ ಪಿಕಪ್ ನಿರ್ಮಿಸಿ ಕಾಲುವೆ ಮುಖಾಂತರ ದೊಡ್ಡಕೆರೆಗೆ ನೀರು ತುಂಬಿಸುವ ಕಾಮಗಾರಿ ಸುಮಾರು ೨ ಕೋಟಿ ವೆಚ್ಚದಲ್ಲಿ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಿದರು. ನಂತರ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಜಗಳೂರು ಗಡಿ ರಸ್ತೆ ಮಾರ್ಗ ಚನ್ನಬಸಯ್ಯನಹಟ್ಟಿ, ಗೌಡಗೆರೆ, ಜೋಗಿಹಟ್ಟಿ, ಮಲ್ಲೂರಹಟ್ಟಿ, ೦.೦೦ ಕಿ.ಮಿ ರಿಂದ ೯.೫೦ ವರೆಗೆ ರಸ್ತೆ ಅಭಿವೃದ್ಧಿ ಪಡಿಸಲು ಸುಮಾರು ೨ ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಾದ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಾಲರಾಜ್, ತಳಕು ಮತ್ತು ನಾಯಕನಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ರೆಡ್ಡಿ, ನಿವೃತ್ತ ಶಿಕ್ಷಕ ತಿಪ್ಪೇಸ್ವಾಮಿರೆಡ್ಡಿ, ಪ.ಪಂ ಅಧ್ಯಕ್ಷೆ ಮಂಜುಳ ಶ್ರೀಕಾಂತ್, ಉಪಾಧ್ಯಕ್ಷೆ ಸರ್ವಮಂಗಳ ಉಮಾಪತಿ, ಸದಸ್ಯರಾದ ಜೆ.ಆರ್.ರವಿಕುಮಾರ್, ವಕೀಲರಾದ ಉಮಾಪತಿ, ಆರ್.ಶ್ರೀಕಾಂತ್, ಎಂ.ಟಿ.ಮAಜುನಾಥ, ಓಬಯ್ಯದಾಸ್, ಅಬಕಾರಿ ತಿಪ್ಪೇಸ್ವಾಮಿ, ಮುಖಂಡ ಪ್ರಭುಸ್ವಾಮಿ, ಬಂಡೆ ಕಪಿಲೆ ಓಬಣ್ಣ, ಬ್ಯಾಂಕ್ ಸೂರನಾಯಕ, ಮುದಿಯಪ್ಪ, ಬಸಪ್ಪನಾಯಕ, ಬೋರನಾಯಕ, ಓಬಳೇಶ್, ಗುತ್ತಿಗೆದಾರ ಗುಂಡುಮುಣಗು ಪ್ರಕಾಶ್, ಸುರೇಂದ್ರ, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹಕೀಮ್, ಜಾಕೀರ್ ಹುಸೇನ್, ದೇವರಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ಕಾಟಯ್ಯ, ಮಲ್ಲೂರಹಳ್ಳಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಕಾಟಯ್ಯ, ಜೋಗಿಹಟ್ಟಿ ತಿಪ್ಪೇಸ್ವಾಮಿ, ವೆಂಕಟೇಶ್, ಪಿ.ಡಿ.ಓ. ಈಶ್ವರಪ್ಪ ಇನ್ನೂ ಮುಂತಾದವರು ಇದ್ದರು.
ಹೈಕಮಾಂಡ್ ಸಚಿವಸ್ಥಾನ ಕೊಟ್ಟರೆ ನಿಭಾಯಿಸುವ ಶಕ್ತಿ ನನ್ನಲ್ಲಿ ಇದೆ. ಇದನ್ನು ಮನಗಂಡು ವರಿಷ್ಟರು ತೀರ್ಮಾನ ತೆಗೆದುಕೊಳ್ಳಬೇಕು. ಸಚಿವ ಸ್ಥಾನ ನೀಡಿದರೆ ಕ್ಷೇತ್ರದಲ್ಲಿ ಇನ್ನು ಹೆಚ್ಚು ಕೆಲಸಗಳನ್ನು ಮಾಡಲು ಸಹಕಾರಿಯಾಗಲಿದೆ. ಜನಗಳ ಆಶೀರ್ವಾದದಿಂದ ಪ್ರತಿ ಬಾರಿ ಗೆಲುವು ಸಾಧಿಸಿದ್ದೇನೆ. ನನ್ನಲ್ಲಿರುವ ಬುದ್ಧಿವಂತಿಕೆ, ಅನುಭವವನ್ನು ಉಪಯೋಗಿಸಿ ಈ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇನೆ. ಎನ್.ವೈ.ಗೋಪಾಲಕೃಷ್ಣ.ಮೊಳಕಾಲ್ಮೂರು ಶಾಸಕರು








