ಹಾಸನ:
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಹಾಸನದಲ್ಲಿ ತಮ್ಮ ತಂದೆ ಹೆಚ್.ಡಿ.ರೇವಣ್ಣ, ಶಾಸಕರಾದ ಎ.ಮಂಜು, ಸಿ.ಎನ್.ಬಾಲಕೃಷ್ಣ ಮತ್ತು ಸ್ವರೂಪ್ ಪ್ರಕಾಶ್ ಅವರ ಸಮ್ಮುಖದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ತಮ್ಮ ಕುಟುಂಬದ ಅರ್ಚಕರ ಸಲಹೆಯಂತೆ ಕಟ್ಟುನಿಟ್ಟಾಗಿ ಬೆಳಗ್ಗೆ 11.20ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರಜ್ವಲ್, ಸರಿಯಾಗಿ 11.30ಕ್ಕೆ ಚುನಾವಣಾಧಿಕಾರಿ ಸಿ ಸತ್ಯಭಾಮಾ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ ಹೊಳೆನರಸೀಪುರ ತಾಲೂಕಿನ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, ಹರದನಹಳ್ಳಿಯ ಈಶ್ವರ ದೇವಸ್ಥಾನ ಹಾಗೂ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆಯ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ತಮ್ಮ ತಾತ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡರ ಆಶೀರ್ವಾದ ಪಡೆದು ಪ್ರಜ್ವಲ್ ನಾಮಪತ್ರ ಸಲ್ಲಿಸಿದರು.
ಹಾಸನದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 40.94 ಕೋಟಿ ಆಸ್ತಿ ಘೋಷಿಸಿಕೊಂಡಿದ್ದಾರೆ. ನಾಮಪತ್ರದ ಜತೆಗೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಪ್ರಜ್ವಲ್ ಬಳಿ 1 ಕೆಜಿ ಚಿನ್ನ, 23 ಕೆಜಿ ಬೆಳ್ಳಿ ಹಾಗೂ 1.90 ಲಕ್ಷ ಮೌಲ್ಯದ ವಜ್ರಾಭರಣವಿದೆ. ಅವರ ಬಳಿ 9.29 ಲಕ್ಷ ನಗದು ಇದೆ.
ಅವರು ತಮ್ಮ ಕೃಷಿ ಭೂಮಿಯಿಂದ 2.75 ಕೋಟಿ ರೂ. ಮತ್ತು ಕೃಷಿಯೇತರ ಚಟುವಟಿಕೆಗಳಿಂದ 1.33 ಕೋಟಿ ರೂ. ಹಣ ಸಂಪಾದಿಸಿದ್ದಾರೆ. ಬೆಂಗಳೂರು, ಮೈಸೂರು, ನೆಲಮಂಗಲ ಮತ್ತು ಹೊಳೆನರಸೀಪುರದಲ್ಲಿ ವಾಣಿಜ್ಯ ಸಂಕೀರ್ಣ ಸೇರಿದಂತೆ ವಿವಿಧ ಆಸ್ತಿಗಳ ಮಾಲೀಕರೂ ಆಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
![](https://prajapragathi.com/wp-content/uploads/2024/03/hasan-p.gif)