ಪ್ರಜ್ವಲ್‌ ಯಾರ ಸಂಪರ್ಕದಲ್ಲೂ ಇಲ್ಲ : ಜಿ ಟಿ ದೇವೇಗೌಡ

ಬೆಂಗಳೂರು: 

       ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದುವರೆಗೆ ಅವರ ಮನೆಯವರು ಸೇರಿದಂತೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಶಾಸಕ ಮತ್ತು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಹೇಳಿದ್ದಾರೆ. 

    ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣನ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ಅವರ ಕುಟುಂಬಸ್ಥರಿಗೂ ಅವರೆಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ, ಯಾವಾಗ ಬರುತ್ತಾರೆ ಎಂದು ಗೊತ್ತಿಲ್ಲ. ಅವರು ಬಂದ ಮೇಲೆಯೇ ನಮಗೆ ಸಹ ಅವರ ಬಗ್ಗೆ ಮಾಹಿತಿ ತಿಳಿಯಲಿದೆ ಪ್ರಜ್ವಲ್ ಮೇಲೆ ಆರೋಪ ಕೇಳಿಬಂದಲ್ಲಿಂದ ಪಕ್ಷದಿಂದ ಅವರ ವಿರುದ್ಧ ಏನು ಕ್ರಮ ತೆಗೆದುಕೊಳ್ಳಬೇಕೋ ಅನ್ನು ನಾವು ಸೂಕ್ತ ಸಮಯದಲ್ಲಿ ಮಾಡಿದ್ದೇವೆ. ಇನ್ನು ಏನಿದ್ದರೂ ಸರ್ಕಾರದ ಕೆಲಸ, ಎಸ್ ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡಿದ್ದಾರೆ, ವಿಚಾರಣೆ ಮಾಡುತ್ತಾರೆ ಎಂದರು.

    ಇಂದು   ಜರ್ಮನ್​​​​ನ ಮ್ಯೂನಿಚ್​​ನಿಂದ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ್ದರು. ಈ ಟಿಕೆಟ್ ನ್ನು ಕ್ಯಾನ್ಸಲ್ ಮಾಡಿದ್ದ ಅವರು, ಮತ್ತೆ ಬುಕ್ ಮಾಡಿದ್ದಾರೆ. ಇಂದು ಮಧ್ಯರಾತ್ರಿ 2 ಗಂಟೆಗೆ ಬ್ಯುಸ್ ನೆಲ್ ಕ್ಲಾಸ್ ಟಿಕೆಟ್ ಬುಕ್ ಮಾಡಿದ್ದಾರೆಂದು ತಿಳಿದುಬಂದಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ ಐಟಿ ಅಧಿಕಾರಿಗಳು ಹದ್ದಿನ ಕಣ್ಣಿರಿಸಿದ್ದಾರೆ.

   ಈ ಎಲ್ಲಾ ಗೊಂದಲ, ಪ್ರಕರಣಗಳ ಮಧ್ಯೆ ಪ್ರಜ್ವಲ್ ತಂದೆ ಶಾಸಕ ಹೆಚ್ ಡಿ ರೇವಣ್ಣ ಇಂದು ಶೃಂಗೇರಿ ಶಾರದಾಂಬೆ ಸನ್ನಿಧಿ ದರ್ಶನ ಮಾಡಲಿದ್ದಾರೆ. ಇದೇ ಪ್ರಕರಣದಲ್ಲಿ ಜೈಲುಪಾಲಾಗಿದ್ದ ರೇವಣ್ಣ ನಿನ್ನೆಯಷ್ಟೇ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿ ಸಂಜೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap