ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ ನಟ ಪ್ರಕಾಶ್‌ ರಾಜ್‌ : ಯಾವುದು ಗೊತ್ತಾ ಆ ವಿಷಯ ….?

ಬೆಂಗಳೂರು: 

    ಸದಾ ಯಾವುದಾದರೊಂದು ವಿವಾದವನ್ನು ಸೃಷ್ಠಿಸುವ ನಟ ಹಾಗೂ ಪ್ರಗತಿಪರ ಚಿಂತಕ ಪ್ರಕಾಶ್‌ ರಾಜ್‌ ಇದೀಗ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ. ಕೇಂದ್ರ ಸರ್ಕಾರವನ್ನು ಟೀಕಿಸುವ  ಭರದಲ್ಲಿ ಆಪರೇಷನ್‌ ಸಿಂದೂರ್‌ ಹಾಗೂ ಭಾರತೀಯ ನಾರಿಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಮತ್ತೆ ಅನಗತ್ಯ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂದೂರ್ ಬಗ್ಗೆ ಪ್ರಕಾಶ್ ರಾಜ್ ವ್ಯಂಗ್ಯವಾಡುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ಅವರು ಆಪರೇಷನ್‌ ಸಿಂದೂರದ ವಿರುದ್ದ ಕಿಡಿ ಕಾರಿ ಟ್ವೀಟ್‌ ಮಾಡಿದ್ದಾರೆ.

   ಭಾರತ ಮೇ 7 ರಂದು ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಇರುವ ಭಯೋತ್ಪಾದಕ ನೆಲೆ ಮೇಲೆ ದಾಳಿ ನಡೆಸಿ ನೂರಕ್ಕೂ ಅಧಿಕ ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಪಹಲ್ಗಾಮ್‌ನಲ್ಲಿ 26 ಮಂದಿಯನ್ನು ಬಲಿ ಪಡೆದ ಪ್ರತಿಕಾರವಾಗಿ ಉಗ್ರರು ಹಾಗೂ ಪಾಕ್ ವಿರುದ್ಧ ಭಾರತ ಆಪರೇಷನ್ ಸಿಂದೂರ್ ನಡೆಸಿತ್ತು. ಈ ಕಾರ್ಯಾಚರಣೆ ಬಗ್ಗೆ ಪ್ರಕಾಶ್ ರಾಜ್ ವ್ಯಂಗ್ಯ ಮತ್ತು ಅಸಹ್ಯದ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಫೋಟೋವೊಂದನ್ನು ತಮ್ಮ ಟ್ವೀಟರ್‌ ಖಾತೆಯಲ್ಲಿ ಶೇರ್ ಮಾಡಿರುವ ಪ್ರಕಾಶ್ ರಾಜ್ ವ್ಯಂಗ್ಯವಾಡಿದ್ದಾರೆ.

   26 ಭಾರತೀಯ ನಾರಿಯರ ಸಿಂದೂರವನ್ನು ಅಳಿಸಿದ್ದಕ್ಕಾಗಿ, ಸರ್ಕಾರ ಪಾಕಿಸ್ತಾನದ ಮೇಲೆ ನಡೆಸಿದ ದಾಳಿಗೆ ಆಪರೇಷನ್‌ ಸಿಂದೂರ ಎಂಬ ಹೆಸರನ್ನಿಟ್ಟಿದೆ. ಈ ಕುರಿತು ಟ್ವೀಟ್‌ ಮಾಡಿರುವ ಪ್ರಕಾಶ್‌ ರಾಜ್‌ ಒನ್ ನೇಷನ್ ಒನ್ ಹಸ್ಬಂಡ್ ಅಂತ ಟ್ವೀಟ್ ಮಾಡಿದ್ದಾರೆ. ಮೋದಿ ಸರ್ಕಾರ ಪ್ರತಿಯೊಂದು ಮನೆಗೆ ಸಿಂದೂರವನ್ನು ಕಳುಹಿಸಲಿದೆ. ಇದು ಒಂದು ತಿಂಗಳುಗಳ ಕಾಲ ನಡೆಯಲಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಟ್ವೀಟ್‌ ನೋಡಿದ ನೆಟ್ಟಿಗರು ನಟನಿಗೆ ಛೀಮಾರಿ ಹಾಕುತ್ತಿದ್ದಾರೆ.

   ಇತ್ತೀಚೆಗೆ ಆಪರೇಷನ್‌ ಸಿಂದೂರ್‌ನ ಭಾಗವಾಗಿದ್ದ ಕರ್ನಲ್‌ ಸೋಫಿಯಾ ಖುರೇಷಿ ವಿರುದ್ಧ ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್‌ ವರ್ಮಾ ನಾಲಿಗೆ ಹರಿಬಿಟ್ಟಿದ್ದರು. ಸಚಿವನ ಹೇಳಿಕೆಗೆ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿತ್ತು. ತಪ್ಪಿನ ಅರಿವಾಗಿ ಸಚಿವ “ನಾನು ಇಡೀ ಭಾರತೀಯ ಸೇನೆ , ಸಹೋದರಿ ಕರ್ನಲ್ ಸೋಫಿಯಾ ಮತ್ತು ಎಲ್ಲಾ ದೇಶವಾಸಿಗಳಿಗೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ” ಎಂದು ಶಾ ಹೇಳಿದ್ದಾರೆ. ಯಾವುದೇ ಸಮುದಾಯವನ್ನು ನೋಯಿಸುವ ಉದ್ದೇಶ ನನಗಿಲ್ಲ ಎಂದು ಅವರು ಕ್ಷಮೆ ಕೇಳಿದ್ದರು. 

   ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರು ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸುಪ್ರೀಂ ಕೋರ್ಟ್ ತೀವ್ರವಾಗಿ ಪ್ರತಿಕ್ರಿಯಿಸಿತ್ತು. ನ್ಯಾಯಾಲಯವು ಅವರ ಕ್ಷಮೆಯಾಚನೆಯನ್ನು ತಿರಸ್ಕರಿಸಿತು. ಅದನ್ನು ಮೊಸಳೆ ಕಣ್ಣೀರು ಎಂದು ಕರೆದಿತ್ತು. ಇಡೀ ದೇಶವು ನಿಮ್ಮ ಹೇಳಿಕೆಯಿಂದ ನಾಚಿಕೆಪಡುತ್ತಿದೆ ಎಂದು ಹೇಳಿತ್ತು. ಈ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್, ಒಬ್ಬ ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಆದೇಶಿಸಿತ್ತು.

Recent Articles

spot_img

Related Stories

Share via
Copy link