ಬೆಂಗಳೂರು:
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕ್ರೆಡಿಟ್ ಯಾರಿಗೆ ಸಿಗಬೇಕು ಎಂಬ ವಾರ್ ಮುಂದುವರಿದ ಬೆನ್ನಲ್ಲೇ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪ್ರತಾಪ್ ಸಿಂಹ ಏನು ಸಚಿವರಾ? ಅವರು ಕೇವಲ ಒಬ್ಬ ಸಂಸದ ಅಷ್ಟೇ. ಈ ಹೆದ್ದಾರಿ ಪೂರ್ತಿ ಪ್ರತಾಪ್ ಸಿಂಹ ಕ್ಷೇತ್ರದಲ್ಲಿ ಬರುತ್ತಾ? ಕಳಸವಾಡಿವರೆಗೆ ಮಾತ್ರ ಪ್ರತಾಪ್ ಸಿಂಹ ಕ್ಷೇತ್ರ ಬರುತ್ತೆ ಅಷ್ಟೇ. ಮಂಡ್ಯ, ರಾಮನಗರ ಜಿಲ್ಲೆಯಲ್ಲೂ ಈ ಹೆದ್ದಾರಿ ಹಾದುಹೋಗುತ್ತದೆ ಎಂದರು.
![](https://prajapragathi.com/wp-content/uploads/2022/04/Siddaramaiah.gif)