ನವದೆಹಲಿ:
ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಆರೋಪಿಸಿ ಪ್ರೇಮಕುಮಾರಿ ಅವರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ರಾಮದಾಸ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.
ತನ್ನನ್ನು ಮದುವೆಯಾಗಿ ವಂಚಿಸಿದ್ದಾರೆಂದು ಪ್ರೇಮಕುಮಾರಿ ಎನ್ನುವರು ರಾಮದಾಸ್ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ರಾಮದಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರೆ ಹೈಕೋರ್ಟ್ ಪ್ರರಣವನ್ನು ರದ್ದುಪಡಿಸಲು ನಿರಾಕರಿಸಿತ್ತು.ನಂತರ ರಾಮದಾಸ್ ಅವರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಸಹ ಮಾಜಿ ಸಚಿವರ ಅರ್ಜಿಯನ್ನು ತಿರಸ್ಕರಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ