ಬೆಂಗಳೂರು:
ಇಂದು ಮೇಲ್ಮನೆಯ ಅಧಿವೇಶನದಲ್ಲಿ ಮಾನ್ಯ ಜನಪ್ರಿಯ ವಿಧಾನ ಪರಿಷತ್ ಶಾಸಕರಾದ ಶ್ರೀ ಚಿದಾನಂದ್ ಎಂ ಗೌಡ ರವರು ಬಯಲು ಸೀಮೆ ಪ್ರದೇಶದ ಪ್ರಮುಖ ಬೆಳೆಯಾದ ಶೇಂಗಾ ಬೆಳೆಯ ಕುರಿತು ಚರ್ಚಿಸಿದರು.
ಪ್ರತಿದಿನ ಒಂದಲ್ಲಾ ಒಂದು ವಿಷಯದ ಬಗ್ಗೆ ಅಧಿವೇಶವನದಲ್ಲಿ ಚರ್ಚಿಸುತ್ತಿರುವ ಚಿದಾನಂದ ಗೌಡ್ರು ಇಂದು ಬಯಲು ಸೀಮೆ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶೇಂಗಾ (ಕಡಲೆಕಾಯಿ) ಬೆಳೆಯು ಅತ್ಯಂತ ಪ್ರಮುಖ ಬೆಳೆಯಾಗಿದ್ದು, ಇಲ್ಲಿ ಅನೇಕ ರೈತರು ಶೇಂಗಾ ಬೆಳೆಯನ್ನೇ ನಂಬಿ ಜೀವನ ಸಾಗಿಸುತ್ತಿದ್ದಾರೆ. ಬಯಲು ಸೀಮೆ ಪ್ರದೇಶದ ಶೇಂಗಾ ಬೆಳೆಗಾರರು ನಿರಂತರವಾಗಿ ನಷ್ಟ ಅನುಭವಿಸುತ್ತಿರುವ ಬಗ್ಗೆ ಶೂನ್ಯ ವೇಳೆಯಲ್ಲಿ ಸರ್ಕಾರದ ಗಮನ ಸೆಳೆದರು.
ರಾಜ್ಯದ 3ನೇ ಶ್ರೀಮಂತ ದೇವಸ್ಥಾನ ಕೊಲ್ಲೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ!
ಕಳೆದ ಐದು ವರ್ಷಗಳಿಂದಲೂ ಸರಿಯಾದ ಸಮಯಕ್ಕೆ ಮಳೆ ಬಾರದ್ದರಿಂದ ಶೇಂಗಾ ಬೆಳೆ ಉತ್ಪಾದನೆ ಕನಿಷ್ಟ ಮಟ್ಟಕ್ಕೆ ಇಳಿದು, ರೈತರು ನಿರಂತರ ಸಮಸ್ಯೆ ಎದುರಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೆ? ಇದಕ್ಕೆ ಸರ್ಕಾರ ರೈತರ ಹಿತ ದೃಷ್ಟಿಯಿಂದ ಏನು ಕ್ರಮ ಕೈಗೊಂಡಿದೆ.
ಮಗಳಿಗೆ ಶ್ರೀಮಂತ ವರ ಸಿಗಲಿ, ನನಗೆ ಪಿಎಸ್ಐ ನೌಕ್ರಿ ಬರಲಿ: ಸವದತ್ತಿ ಯಲ್ಲಮ್ಮಗೆ ಭಕ್ತರಿಂದ ವಿಚಿತ್ರ ಬೇಡಿಕೆ
ಬೆಳೆ ವಿಮೆ ಕೂಡ ಸರಿಯಾಗಿ ತಲುಪುತ್ತಿಲ್ಲ, ಆದ್ದರಿಂದ ಸರ್ಕಾರ ಉತ್ತಮ ಯೋಜನೆ ರೂಪಿಸಿ ಬಯಲುಸೀಮೆಯಲ್ಲಿ ಶೇಂಗಾ ಪ್ರಮುಖ ಎಣ್ಣೆಕಾಳು ಬೆಳೆಯಾಗಿರುವುದರಿಂದ ಶೇಂಗಾ ಬೆಳೆಯನ್ನು ವೈಜ್ಞಾನಿಕ ವಿಧಾನಗಳಿಂದ ಬೆಳೆಗಾರರನ್ನು ಸದೃಢಗೊಳಿಸಿ, ಉತ್ತಮ ಬೆಂಬಲ ಬೆಲೆ ಒದಗಿಸಿ ನಮ್ಮ ರೈತರಿಗೆ ವಿಶೇಷ ಪ್ಯಾಕೇಜ್ ನೀಡುವುದು ಹಾಗೂ ಶೇಂಗಾ ಅಭಿವೃಧ್ದಿ ಮಂಡಳಿ ಸ್ಥಾಪಿಸುವುದರ ಮೂಲಕ ಶೇಂಗಾ ಬೆಳೆಯುವ ರೈತರನ್ನು ಪ್ರೋತ್ಸಾಹಿಸುವಂತೆ ಮಾನ್ಯ ಸಭಾಪತಿಗಳ ಮೂಲಕ ಸರ್ಕಾರದ ಕೃಷಿ ಸಚಿವರನ್ನು ಒತ್ತಾಯಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
