ನಡುರಸ್ತೆಯಲ್ಲೇ ಸಂಸದನ ಹೊಡೆದು ಕೊಂದ ಪ್ರತಿಭಟನಾಕಾರರು: ವಿಶ್ವ ವೇದಿಕೆಯಲ್ಲಿ ಭಾರೀ ಸಂಚಲನ

ಕೊಲಂಬೋ:

 ಶ್ರೀಲಂಕಾದಲ್ಲಿ ನಡೆದ ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನ ಹತ್ಯೆ ಮಾಡಲಾಗಿದೆ. ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆಯ ನಂತರ ಘರ್ಷಣೆ ನಡೆದಿದ್ದು, ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಆತುಕೋರಾಲ ಅವರನ್ನು ಥಳಿಸಿ ಹತ್ಯೆ ಮಾಡಲಾಗಿದೆ.

ಪ್ರಯಾಣಿಕರು ಮೊಬೈಲ್‌ನಲ್ಲಿ ರಾತ್ರಿ ಜೋರಾಗಿ ಮಾತಾಡುವಂತಿಲ್ಲ: ಭಾರತೀಯ ರೈಲ್ವೆ

ಮಹಿಂದಾ ರಾಜಪಕ್ಸೆ ರಾಜೀನಾಮೆಯಿಂದ ಕೆರಳಿದ ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತುಕೋರಾಲ ಅವರು ರಾಜಧಾನಿ ಕೊಲಂಬೊ ಬಳಿ ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಈ ವೇಳೆ ಮೂವರು ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಖ್ಯಾತ ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ’ ಇನ್ನಿಲ್ಲ 

ಸಂಸದರ ಈ ನಡೆಯಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ನಿಟ್ಟಂಪುರದಲ್ಲಿ ಅಮರಕೀರ್ತಿ ಅವರ ಕಾರ್ ತಡೆದು ನಿಲ್ಲಿಸಿದ್ದು, ಅವರ ಮೇಲೆ ದಾಳಿ ಮಾಡಿ ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಶ್ರೀಲಂಕಾದಲ್ಲಿ ಆಡಳಿತ ಪಕ್ಷದ ಸಂಸದರೊಬ್ಬರನ್ನು ನಾಗರಿಕರು ಥಳಿಸಿ ಕೊಂದಿರುವ ಘಟನೆ ವಿಶ್ವ ವೇದಿಕೆಯಲ್ಲಿ ಭಾರೀ ಸಂಚಲನ ಮೂಡಿಸಿದೆ.

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಲೈವ್ ಸ್ಟ್ರೀಮಿಂಗ್ ಬ್ಯಾನ್ ಗೆ ಚೀನಾ ಕ್ರಮ

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap