PSI ಎಕ್ಸಾಂ ಅಕ್ರಮ: ನನಗೆ ಸಚಿವರ ಸಂಬಂಧಿ ಮತ್ತು ಡಿಕೆಶಿ ಪರಿಚಯವಿದೆ. ಎನ್ನುತ್ತಲೇ ಬೇಸರ ವ್ಯಕ್ತಪಡಿಸಿದ ದರ್ಶನ್​ ಗೌಡನ ತಂದೆ

ಮಾಗಡಿ: 

ಮಗನ ಕೆಲಸದ ವಿಚಾರವಾಗಿ ಯಾರೊಂದಿಗೂ ಹಣದ ವ್ಯವಹಾರ ಮಾಡಿಲ್ಲ ಎಂದು ಪಿಎಸ್​ಐ ನೇಮಕಾತಿ ಹಗರಣದಲ್ಲಿ ಹೆಸರು ತಳುಕು ಹಾಕಿಕೊಂಡಿರುವ ದರ್ಶನ್​ಗೌಡ ಅವರ ತಂದೆ, ಜೆಡಿಎಸ್​ ಮುಖಂಡ ವೆಂಕಟೇಶ್​ ಸ್ಪಷ್ಟಪಡಿಸಿದ್ದಾರೆ. ನಾಯಕರು ತಮ್ಮ ರಾಜಕೀಯ ಹಗೆತನಕ್ಕೆ ನಮ್ಮನ್ನು ಬಲಿಪಶು ಮಾಡುತ್ತಿದ್ದಾರೆ.

ನನ್ನ ಮಗ ದರ್ಶನ್​ಗೌಡ ಪಿಎಸ್​ಐ ಪರೀಕ್ಷೆ ಬರೆದು 5ನೇ ರ್ಯಾಂಕ್​ ಪಡೆದಿರುವುದು ನಿಜ. ನಮ್ಮ ಮಗ ಸಿಐಡಿ ವಿಚಾರಣೆ ಎದುರಿಸಿದ್ದಾನೆ. ಆತನ ಒಎಂಆರ್​ ಶೀಟ್​, ಹಾಲ್​ ಟಿಕೆಟ್​ ಹಾಜರುಪಡಿಸಿದ್ದಾನೆ. ತನಿಖೆ ನಡೆಯುತ್ತಿದೆ. ತಪ್ಪಿದ್ದರೆ ಶಿಕ್ಷೆಯಾಗಲಿ ಎಂದರು.

ಯೂರೋಪ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ಬರ್ಲಿನ್‌ನಲ್ಲಿ ಪ್ರತಿಧ್ವನಿಸಿತು ʻ2024; ಮೋದಿ ಒನ್ಸ್ ಮೋರ್ʼ ಘೋಷಣೆ!

ಕೆಸರೆರಚಾಟಕ್ಕೆ ವೇದಿಕೆ: ದಿನಕ್ಕೊಂದು ಸ್ಫೋಟಕ ತಿರುವು ಪಡೆದುಕೊಳ್ಳುತ್ತಿರುವ ಪಿಎಸ್​ಐ ನೇಮಕಾತಿ ಹಗರಣ ರಾಜಕೀಯ ನಾಯಕರ ಕೆಸರೆರಚಾಟಕ್ಕೆ ವೇದಿಕೆಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್​.ಅಶ್ವತ್ಥನಾರಾಯಣ ಸಹೋದರ ಸತೀಶ್​ ಗೌಡ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ದರ್ಶನ್​ಗೌಡ ಎಂಬ ಅಭ್ಯರ್ಥಿಯಿಂದ 80 ಲಕ್ಷ ರೂ. ಪಡೆದಿದ್ದಾರೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಉಗ್ರಪ್ಪ ನೇರವಾಗಿ ಆರೋಪಿಸಿದ್ದಾರೆ.

ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಕೂಡ ಪ್ರಭಾವಿ ಸಚಿವರ ತಮ್ಮನ ಮೂಲಕ ಮಾಗಡಿ ಮೂಲದ ಅಭ್ಯರ್ಥಿ ಹಣದ ವ್ಯವಹಾರ ಮಾಡಿದ್ದಾರೆ. ನಾವೆಲ್ಲ ಗಂಡಸರಲ್ಲ, ಅವರೊಬ್ಬರೇ ಗಂಡಸರು ಎನ್ನುವ ಮೂಲಕ ಪರೋಕ್ಷವಾಗಿ ಸಚಿವ ಅಶ್ವತ್ಥ ನಾರಾಯಣ್​ ವಿರುದ್ಧ ಕೈ ತೋರಿಸಿದ್ದಾರೆ. ರಾಜಕೀಯ ನಾಯಕರ ಕೆಸರೆರಚಾಟದ ಬೆನ್ನಲ್ಲೇ ಮರೂರು ಹ್ಯಾಂಡ್​ಪೋಸ್ಟ್​ನ ದರ್ಶನ್​ಗೌಡನ ತಂದೆ, ಜೆಡಿಎಸ್​ ಮುಖಂಡ ವೆಂಕಟೇಶ್​ ಬೇಸರ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ

ನನಗೆ ಸಚಿವರ ಸಹೋದರ ಮತ್ತು ಡಿಕೆಶಿ ಪರಿಚಯವಿದೆ: ನಾನು ತಾಪಂ ಮಾಜಿ ಉಪಾಧ್ಯಕ್ಷನಾಗಿ ರಾಜಕೀಯ ಜೀವನದಲ್ಲಿ ಇದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಮತ್ತು ಅವರ ತಮ್ಮ ಸತೀಶ್​ಗೌಡ ಇಬ್ಬರೂ ಪರಿಚಯಸ್ಥರು ಹಾಗೂ ಸಂಬಂಧಿಗಳು. ಆದರೆ ಮಗನ ಕೆಲಸದ ವಿಚಾರದಲ್ಲಿ ಯಾರೊಂದಿಗೂ ಹಣದ ವ್ಯವಹಾರ ಮಾಡಿಲ್ಲ ಎಂದ ವೆಂಕಟೇಶ್​, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪರಿಚಯ ಕೂಡ ಇದೆ.

ಈ ಹಿಂದೆ ಎಸ್​.ಎಂ.ಕೃಷ್ಣ ಅವರು ಕಾಂಗ್ರೆಸ್​ನಲ್ಲಿದ್ದ ಅವಧಿಯಲ್ಲಿ ನನ್ನ ಮನೆಯಲ್ಲೇ ಡಿ.ಕೆ.ಶಿವಕುಮಾರ್​ ಸುದ್ದಿಗೋಷ್ಠಿ ನಡೆಸಿದ್ದರು. ಆದರೆ ಇಂದು ನನ್ನ ಗುರುತು ಹಿಡಿಯುವುದಿಲ್ಲ. ನಾನು ಬಹಳ ಹಿಂದಿನಿಂದಲೂ ರಾಜಕೀಯವಾಗಿ ಗುರುತಿಸಿಕೊಂಡಿದ್ದೇನೆ. ಹಾಗಾಗಿ ಎಲ್ಲ ನಾಯಕರ ಪರಿಚಯ ಇದೆ. ನಮ್ಮ ಮನೆಗೆ ಡಿ.ಕೆ. ಶಿವಕುಮಾರ್​ ಮತ್ತು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಸೇರಿ ಹಲವು ರಾಜಕೀಯ ನಾಯಕರು ಭೇಟಿ ನೀಡಿದ್ದಾರೆ.

 ಕೋವಿಡ್-19 ಲಸಿಕೆ ಪಡೆಯಲು ಯಾರನ್ನೂ ಒತ್ತಾಯಿಸುವಂತಿಲ್ಲ : ಸುಪ್ರಿಂಕೋರ್ಟ್‌ ಮಹತ್ವದ ತೀರ್ಪು

1994ರಿಂದಲೂ ರಾಜಕೀಯದಲ್ಲಿ ಇದ್ದೇನೆ, 1994ರಲ್ಲಿ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದೆ. ನಂತರ ಕಾಂಗ್ರೆಸ್​ಗೆ ಸೇರ್ಪಡೆಯಾದೆ. 2004ರಲ್ಲಿ ಕಾಂಗ್ರೆಸ್​ ತೊರೆದು ಜೆಡಿಎಸ್​ ಸೇರಿದೆ. ಪ್ರಸ್ತುತ ಜೆಡಿಎಸ್​ನಲ್ಲಿದ್ದೇನೆ ಎಂದು ವೆಂಕಟೇಶ್​ ಹೇಳಿದರು.

           ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap