ಪಿಎಸ್‌ಐ ನೇಮಕಾತಿ ಹಗರಣ: ಪ್ರಿಯಾಂಕ್ ಖರ್ಗೆಗೆ ಸಿಐಡಿಯಿಂದ ಮೂರನೇ ನೋಟಿಸ್ ಜಾರಿ

ಕಲಬುರಗಿ:

545 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಬುಧವಾರ ಕೆಪಿಸಿಸಿ ವಕ್ತಾರ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಮೂರನೇ ಬಾರಿಗೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ಈ ನೋಟಿಸ್‌ ಸ್ವೀಕರಿಸಿದ ಎರಡು ದಿನದೊಳಗೆ ತನಿಖಾಧಿಕಾರಿ ಮುಂದೆ ಹಾಜರಾಗಿ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಕುರಿತು ಹೇಳಿಕೆ ದಾಖಲಿಸುವಂತೆ ಪ್ರಿಯಾಂಕ ಖರ್ಗೆ ಅವರಿಗೆ ಡಿವೈಎಸ್ಪಿ ನರಸಿಂಹಮೂರ್ತಿ ಸೂಚಿಸಿದ್ದಾರೆ.

‘ನಂಗೂ ಆಫರ್ ಇದೆ.. ಯಾಕೆ ಸತತ 15 ವರ್ಷಗಳಿಂದ RCBಯಲ್ಲೇ ಇದ್ದೀನಿ ಅಂದರೆ..’ ವಿರಾಟ್ ಕೊಹ್ಲಿ

ಈ ಹಿಂದೆ ಕೂಡ ಎರಡು ಬಾರಿ ಸಿಐಡಿ ಪ್ರಿಯಾಂಕ್ ಖರ್ಗೆಯವರಿಗೆ ನೋಟಿಸ್‌ ಜಾರಿಗೊಳಿಸಿತ್ತು. ನೋಟಿಸ್ ಸ್ವೀಕರಿಸಿದ್ದರೂ ವಿಚಾರಣೆಗೆ ಹಾಜರಾಗಲು ಖರ್ಗೆ ನಿರಾಕರಿಸಿದ್ದರು. ಇದೀಗ ಮತ್ತೆ ಸಿಐಡಿ ನೋಟಿಸ್‌ ನೀಡಿದ್ದು, ಈಗಲಾದರೂ ವಿಚಾರಣೆಗೆ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಹಾಜರಾಗಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

IPL 2022..ಚೆನ್ನೈ ವಿರುದ್ಧ RCB ತಂಡಕ್ಕೆ ಭರ್ಜರಿ ಗೆಲುವು: ನಾಲ್ಕನೇ ಸ್ಥಾನಕ್ಕೆ ಲಗ್ಗೆ ಇಟ್ಟ ರಾಯಲ್ ಚಾಲೆಂಜರ್ಸ್

ಪಿಎಸ್‌ಐ ನೇಮಕಾತಿ ಪ್ರಕರಣ ಬೆಳಕಿಗೆ ಬಂದ ನಂತರ ಸುದ್ದಿಗೋಷ್ಠಿ ನಡೆಸಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಅವರು, ತಮ್ಮ ಬಳಿ ಅಕ್ರಮದ ಬಗ್ಗೆ ಪುರಾವೆಗಳಿವೆ ಎಂದಿದ್ದರು. ಅಲ್ಲದೆ, ಇಬ್ಬರು ಆರೋಪಿಗಳ ನಡುವೆ ಪಿಎಸ್‌ಐ ಹುದ್ದೆ ಪಡೆಯುವ ಸಂಬಂಧ ನಡೆಸಿದ್ದರು ಎನ್ನಲಾದ ‘ಡೀಲ್‌’ ಮಾತುಕತೆಯ ಆಡಿಯೋವನ್ನು ಬಿಡುಗಡೆಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡುವಂತೆ ಸಿಐಡಿ ಸೂಚಿಸಿದೆ.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap