ಕೊಪ್ಪಳ : ನವೋದಯ ವಿದ್ಯಾಲಯದಲ್ಲಿ ರ‍್ಯಾಗಿಂಗ್‌: ಸಿಬ್ಬಂದಿ, ಪ್ರಿನ್ಸಿಪಾಲ್​ ಮೌನ

ಕೊಪ್ಪಳ

    ಜಿಲ್ಲೆಯ ಕುಕನೂರು ಪಟ್ಟಣದ ಬಳಿಯಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ ರ‍್ಯಾಗಿಂಗ್‌ ನಡೆದಿರುವ ಆರೋಪ ಕೇಳಿ ಬಂದಿದೆ. ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ. PU ವಿದ್ಯಾರ್ಥಿಗಳು 60ಕ್ಕೂ ಅಧಿಕ ಹೈಸ್ಕೂಲ್​ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಟ್ಟಿಗೆ, ಬೆಲ್ಟ್​​ನಿಂದ ಹಲ್ಲೆ ನಡೆಸಿದ್ದು ಕೆಲವರಿಗೆ ಮರ್ಮಾಂಗಕ್ಕೆ ಒದ್ದು ವಿಕೃತಿ ಮರೆದಿದ್ದಾರೆ ಎನ್ನಲಾಗುತ್ತಿದೆ. ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ  ಪೋಷಕರು ಆಗ್ರಹಿಸಿದ್ದಾರೆ.

    ಆಗಸ್ಟ್ 20 ರಂದು ಕ್ಷುಲ್ಲಕ ಕಾರಣಕ್ಕೆ ಜೂನಿಯರ್ ವಿದ್ಯಾರ್ಥಿಗಳನ್ನು ಕರೆಸಿಕೊಂಡು ಸೀನಿಯರ್ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಪಾಲಕರಿಗೆ, ಶಿಕ್ಷಕರಿಗೆ ಹೇಳಿದ್ರೆ ನಿಮ್ಮನ್ನು ಸುಮ್ಮನೆ ಬಿಡೋದಿಲ್ಲಾ ಅಂತ ಬೆದರಿಕೆ ಕೂಡ ಹಾಕಿದ್ದಾರೆ. ಹಲ್ಲೆಯಿಂದ ನೊಂದ ವಿದ್ಯಾರ್ಥಿಗಳು ಶಾಲಾ ಸಿಬ್ಬಂದಿಗೆ ಈ ವಿಚಾರ ಹೇಳಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಅಷ್ಟೇ ಅಲ್ಲ ಪ್ರಾಂಶುಪಾಲರ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಂಡಿಲ್ಲ.

    ಪಿಯು ವಿದ್ಯಾರ್ಥಿಗಳ ಪುಂಡಾಟಕ್ಕೆ ಕಡಿವಾಣ ಹಾಕಿಲ್ಲ. ಹೀಗಾಗಿ ಪ್ರಾಂಶುಪಾಲರು, ಸಿಬ್ಬಂದಿಯನ್ನು ಬದಲಾಯಿಸುವಂತೆ ಹಾಗೂ ಹಲ್ಲೆ ನಡೆಸಿರುವ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕುವಂತೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲದಿದ್ದರೆ ಶಾಲೆ ಮುಂದೆ ಧರಣಿ ನಡೆಸೋದಾಗಿ ಎಚ್ಚರಿಕೆ ನೀಡಿದ್ದಾರೆ. ಘಟನೆ ಬಗ್ಗೆ ಪೋಷಕರು ಸಂಸದ ರಾಜಶೇಖರ್​ ಹಿಟ್ನಾಳ್​​ಗೆ ದೂರು ನೀಡಿದ್ದು ಇದೀಗ ಕೊಪ್ಪಳ ಜಿಲ್ಲಾಧಿಕಾರಿಗೆ ದೂರು ನೀಡಲು ಪೋಷಕರು ಮುಂದಾಗಿದ್ದಾರೆ.

 

Recent Articles

spot_img

Related Stories

Share via
Copy link