ಬಸಿಲಿನ ದಗೆಗೆ ತಂಪೆರೆದ ವರುಣ…!

ಬೆಂಗಳೂರು

    ಬೇಸಿಗೆಯಲ್ಲಿನ  ಉರಿ ಬಿಸಿಲಿನ ಬೇಗೆಯಲ್ಲಿ ಬೆಂದು ಬಸವಳಿದಿದ್ದ ಬೆಂಗಳೂರು ಮಂದಿಗೆ ಮಳೆ  ತಂಪೆರೆದಿದೆ.  ಬೆಂಗಳೂರಿನ ಜನರಿಗೆ ಮಳೆ ಬಿಸಿಲಿನ ತಾಪಮಾನವನ್ನು ಕಡಿಮೆ ಮಾಡಿದೆ. ಬೆಂಗಳೂರಿನಲ್ಲಿ ಗುರುವಾರ 3.4ಮಿಮೀ ಮಳೆಯಾಗಿದೆ. ಇದು ಮೊದಲ ಮುಂಗಾರು ಪೂರ್ವ ಮಳೆ ಯಾಗಿದ್ದು ಇತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಜೊತೆಗೆ ಮುಂದಿನ 48 ಗಂಟೆಗಳ ಕಾಲ ಕರ್ನಾಟಕದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಸಮುದ್ರಮಟ್ಟದಲ್ಲಿ ಸೃಷ್ಟಿಯಾದ ಸುಳಿಗಾಳಿ ಕಾರಣದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧಡೆ ಮುಂದಿನ ಮೂರ್ನಾಲ್ಕು ದಿನ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap