ನವದೆಹಲಿ:
ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಸಮೀಪಿಸುತ್ತಿದ್ದಂತೆ ದೇವಾಲಯದ ಹೆಸರಿನಲ್ಲಿ ಭಕ್ತರನ್ನು ಲೂಟಿ ಮಾಡುವ ಆಘಾತಕಾರಿ ದಂಧೆ ಬೆಳಕಿಗೆ ಬಂದಿದೆ
ಸೈಬರ್ ಕ್ರಿಮಿನಲ್ಗಳು ದೇವಸ್ಥಾನದ ಹೆಸರಿನಲ್ಲಿ ದೇಣಿಗೆ ಪಡೆಯಲು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹಾಕಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ (ವಿಹೆಚ್ಪಿ) ಎಚ್ಚರಿಸಿದೆ. QR ಕೋಡ್ ಅನ್ನು ಸ್ಕ್ಯಾನ್ ಮಾಡಿ, ರಾಮಮಂದಿರ ದೇವಾಲಯಕ್ಕಾಗಿ ದೇಣಿಗೆ ನೀಡುವಂತೆ ಸಂದೇಶ ಕಳುಹಿಸಲಾಗಿದೆ
ದೇಣಿಗೆ ನೀಡುವವರಂತೆ ವಂಚಕರಿಗೆ ಕರೆ ಮಾಡಿ ಅದರ ಆಡಿಯೋ ರೆಕಾರ್ಡ್ನ್ನು ವಿಹೆಚ್ಪಿ ಕಾರ್ಯಕರ್ತ ರೊಬ್ಬರು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ವಂಚಕ, ದಾನಿಗಳ ಹೆಸರುಗಳು ಮತ್ತು ಸಂಪರ್ಕ ವಿವರಗಳನ್ನು ನಮೂದಿಸಲಾಗುತ್ತಿದೆ. ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಅವರನ್ನು ರಾಮ ಮಂದಿರಕ್ಕೆ ಆಹ್ವಾನಿಸಲಾಗುವುದು ಎಂದು ಹೇಳಿದ್ದಾನೆ
ಹಿಂದೂ ಮತ್ತು ಮುಸ್ಲಿಂ ಸಮಾಜಗಳ ನಡುವೆ ಸಂಘರ್ಷ ಪ್ರಾರಂಭವಾಗಿದೆ. ಮುಸ್ಲಿಮರು ಮಂದಿರ ನಿರ್ಮಾಣವನ್ನು ಮುಂದುವರಿಸಲು ಬಿಡುತ್ತಿಲ್ಲ. ಹಾಗಾಗಿ ದೇಗುಲ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದೇವೆ ವಂಚಕ ಹೇಳಿಕೊಂಡಿದ್ದಾನೆ.
![](https://prajapragathi.com/wp-content/uploads/2023/10/ram-mandir-.jpg)