ನವದೆಹಲಿ :
ದೇಶದ ಅರ್ಥವ್ಯವಸ್ಥೆ ಚೇತರಿಕೆಗೆ ಆರ್.ಬಿ.ಐ ನಿಂದ ಇಂದು ಕೆಲವು ಮಹತ್ವದ ಘೋಷಣೆಗಳನ್ನು ಮಾಡಲಾಗುತ್ತಿದೆ ಎಂದು ಆರ್.ಬಿ.ಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
Today humanity is facing the trial of its time, as #COVID19 grips the world with its deadly embrace. In this kind of environment Reserve Bank of India (RBI) has been very proactive & monitoring the situation closely: RBI Governor Shaktikanta Das pic.twitter.com/Qgim2m01Wq
— ANI (@ANI) April 17, 2020
ಇಂದು ಸುದ್ದಿಗೋಷ್ಟಿ ನಡೆಸಿದ ಆರ್.ಬಿ.ಐ ಗವರ್ನರ್ ಶಕ್ತಿಕಾಂತ್ ದಾಸ್, ಕೊರೊನಾ ವೈರಸ್ ನಿಯಂತ್ರಿಸುವ ದೃಷ್ಟಿಯಿಂದ ಭಾರತ ಲಾಕ್ ಡೌನ್ ಮಾಡಲಾಗಿದ್ದು, ಇದರಿಂದ ದೇಶದ ಆರ್ಥಿಕತೆ ತೀವ್ರ ಹೊಡೆತ ಕೊಟ್ಟಿದೆ. ದೇಶದ ಆರ್ಥಿಕತೆಗೆ ಶಕ್ತಿ ತುಂಬುವ ಹಾಗೂ ಕೃಷಿ ಮತ್ತು ಸಣ್ಣ ಕೈಗಾರಿಕೆಗಳ ಪುನಶ್ಚೇತನಕ್ಕೆ ಹಲವು ಘೋಷಣೆಗಳನ್ನು ಮಾಡಲಾಗಿದೆ.
ಆರ್ಥಿಕತೆ ಪುನಶ್ಚೇತನಕ್ಕೆ ಆರ್.ಬಿ.ಐನಿಂದ ಮಹತ್ವದ ಘೋಷಣೆಗಳು :
It has been decided to provide special refinance facilities for an amount of Rs 50,000 crores to National Bank for Agriculture & Rural Development, Small Industries Development Bank of India, and National Housing Bank to enable them to meet sectoral credit needs: RBI Governor pic.twitter.com/THfzm2O4qm
— ANI (@ANI) April 17, 2020
- ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 50 ಸಾವಿರ ಕೋಟಿ ಮೀಸಲು.
- ನಬಾರ್ಡ್ ಗೆ 25 ಸಾವಿರ ಕೋಟಿ ನೀಡಲಾಗುತ್ತಿದೆ.
- ನಬಾರ್ಡ್ 25 ಸಾವಿರ ಕೋಟಿ ಮೀಸಲಿಡಲಾಗಿದೆ.
- ಸಿಐಡಿಬಿಐ- ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಮಂಡಳಿಗೆ 15 ಸಾವಿರ ಕೋಟಿ ಮೀಸಲು.
- ನ್ಯಾಶನಲ್ ಹೌಸಿಂಗ್ ಬ್ಯಾಂಕ್ ಗೆ 10 ಸಾವಿರ ಕೋಟಿ ಮೀಸಲು.
- ಕೊರೊನಾ ವಿರುದ್ಧ ಹೋರಾಟಕ್ಕೆ ರಾಜ್ಯಗಳಿಗೆ ಶೇ.60ರಷ್ಟು ಹೆಚ್ಚುವರಿ ಹಣ.
- ರಿವರ್ಸ್ ರೆಪೋ ದರ ಬೇಸಿಕ್ 25 ಪಾಯಿಂಟ್ ಕಡಿತ .
- ರಿವರ್ಸ್ ರೆಪೋ ದರ ಶೇ.3.75ರಷ್ಟು ಇಳಿಕೆ.
- ಇದರಿಂದ ಆರ್.ಬಿ.ಐನಿಂದ ಬ್ಯಾಂಕ್ ಗಳಿಗೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ.
- ಬ್ಯಾಂಕ್ ಗಳು ಲಾಭದ ಅಂಶವನ್ನು ಘೋಷಣೆ ಮಾಡುವ ಅಗತ್ಯವಿಲ್ಲ.
- 3 ತಿಂಗಳ ಕಾಲ ಎನ್ ಪಿ.ಎ ನಿಯಮ ಅನ್ವಯಿಸುವುದಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
