ಬೆಳಗಾವಿ:
ಮೊದಲ ಬಾರಿಗೆ ಐಪಿಎಲ್ 18ನೇ ಆವೃತ್ತಿಯ ಚಾಂಪಿಯನ್ಸ್ ಆಗಿ ಆರ್ಸಿಬಿ ಹೊರಹೊಮ್ಮಿದ್ದು, ಆರ್ಸಿಬಿ ಫ್ಯಾನ್ಸ್ ಸಂಭ್ರಮ ಮುಗಿಲು ಮುಟ್ಟಿದೆ. ಇದೀಗ ಈ ಸಂಭ್ರಮಾಚರಣೆ ನಡುವೆಯೇ ಬೆಳಗಾವಿಯಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಬೆಳಗಾವಿಯಲ್ಲಿ ಸಂಭ್ರಮಾಚರಣೆಯ ವೇಳೆ ಆರ್ಸಿಬಿಯ ಕಟ್ಟಾ ಅಭಿಮಾನಿ ಡ್ಯಾನ್ಸ್ ಮಾಡುತ್ತಲೇ, ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಿನ್ನೆ ರಾತ್ರಿ ಆರ್ ಸಿ ಬಿ ಗೆದ್ದ ಬಳಿಕ ಸಂಭ್ರಮಾಚರಣೆಯ ವೇಳೆ ಆರ್ಸಿಬಿ ಫ್ಯಾ ಅಭಿಮಾನಿಯಾಗಿದ್ದ ಮಂಜುನಾಥ್ ಈರಪ್ಪ ಕಂಬಾರ್ (28) ಹೃದಯಾಘಾತದಿಂದ ಸಾವನಪ್ಪಿದ್ದಾನೆ. ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಆರ್ಸಿಬಿ ಗೆಲವು ಸಂಭ್ರಮಾಚರಣೆಯ ವೇಳೆ ಕುಣಿಯುತ್ತಲೇ, ಕುಸಿದು ಬಿದ್ದು ಮಂಜುನಾಥ್ ಸಾವನಪ್ಪಿದ್ದಾನೆ.
ಮೃತ ಮಂಜುನಾಥ ಕೆ ಕ್ರಿಕೆಟ್ ಅಂದರೆ ಎಲ್ಲಿಲ್ಲದ ಹುಚ್ಚು ಅದರಲ್ಲೂ ಐಪಿಎಲ್ ಅಂತ ಬಂದರೆ ಆರ್ ಸಿ ಬಿ ಆತನ ನೆಚ್ಚಿನ ತಂಡವಾಗಿತ್ತು. ಆರ್ಸಿಬಿ ಗೆದ್ದ ಕೂಡಲೇ ಗ್ರಾಮದ ಯುವಕರೊಂದಿಗೆ ಮಕ್ಕಳೊಂದಿಗೆ ಕುಣಿದು ಸಂಭ್ರಮಾಚರಣೆ ಮಾಡುತ್ತಿರುವ ವೇಳೆ, ಕುಸಿದು ಬಿದ್ದು ಮಂಜುನಾಥ್ ಸಾವನಪ್ಪಿದ್ದಾನೆ. ಮೃತ ಮಂಜುನಾಥಗೆ ಆರು ತಿಂಗಳ ಹೆಣ್ಣು ಮಗುವಿದೆ.
