ಬೆಂಗಳೂರು:
ಕೋಟ್ಯಾಂತರ ಅಭಿಮಾನಿಗಳ ಬೆಂಬಲ, ಹಾರೈಕೆ, ಪ್ರಾರ್ಥನೆ ಕೊನೆಗೂ ಫಲಿಸಿದೆ. 18ನೇ ಪ್ರಯತ್ನದಲ್ಲಿ ಆರ್’ಸಿಬಿ ತಂಡ ಟ್ರೋಫಿಗೆ ಮುತ್ತಿಟ್ಟಿದೆ. ಈ ಐತಿಹಾಸಿಕ ಗೆಲುವು ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (ತಂಡ ವಿಜಯೋತ್ಸವದ ಮೆರವಣಿಗೆಯನ್ನು ಘೋಷಣೆ ಮಾಡಿದೆ.
ಗೆಲುವು ಬೆನ್ನಲ್ಲೇ ಆರ್ಸಿಬಿ ಫ್ರಾಂಚೈಸಿ ತಮ್ಮ ನಿಷ್ಠಾವಂತ ಅಭಿಮಾನಿಗಳೊಂದಿಗೆ ಗೆಲುವಿನ ಸಂಭ್ರಮಾಚರಣೆ ಮಾಡಲು ವಿಜಯೋತ್ಸವದ ಮೆರವಣಿಗೆಯನ್ನು ಘೋಷಣೆ ಮಾಡಿದೆ.
ಇಂದು ಸಂಜೆ 5 ಗಂಟೆಗೆ ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವದ ಮೆರವಣಿಗೆ ನಡೆಯಲಿದೆ. ಈ ವಿಜಯೋತ್ಸವ ಮೆರಣವಣಿಗೆ ವಿಧಾನಸೌಧದಿಂದ ಆರಂಭವಾಗಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಕ್ತಾಯವಾಗಲಿದೆ. ಆಟಗಾರರನ್ನು ಸ್ವಾಗತಿಸಲು ಬೆಂಗಳೂರು ಸಜ್ಜಾಗಿದ್ದು, ವಿಜಯೋತ್ಸವ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗುವ ನಿರೀಕ್ಷೆಗಳಿವೆ.
ಈ ಕುರಿತು ಆರ್ಸಿಬಿ ತಂಡದ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇದು ಆರ್ಸಿಬಿಯ ವಿಜಯೋತ್ಸವ ಪರೇಡ್. ಇದು ನಿಮಗಾಗಿ, 12th ಮ್ಯಾನ್ ಆರ್ಮಿ ಎಂದು ಅಭಿಮಾನಿಗಳನ್ನು ಉಲ್ಲೇಖಿಸಲಾಗಿದ್ದು, ಆರ್ಸಿಬಿ ಸೋಲಿನಲ್ಲಿ ಮತ್ತು ಗೆಲುವಿನಲ್ಲೂ ಪ್ರತಿ ಭಾರಿ ಬೆಂಬಲಾವಗಿ ನಿಂತ ನಿಷ್ಠಾವಂತ ಅಭಿಮಾನಿಗಳೆ ಈ ಗೆಲುವಿನ ಕಿರೀಟ ನಿಮ್ಮದೇ ಎಂದು ಹೇಳಿದೆ.
ವಿಜಯೋತ್ಸವ ಮೆರವಣಿಗೆ ವಿವರ ಇಂತಿದೆ…
- ಬೆಳಿಗ್ಗೆ 10: ವಿರಾಟ್ ಮತ್ತು ತಂಡ ಅಹಮದಾಬಾದ್ನಿಂದ ಹೊರಡುತ್ತದೆ
- ಮಧ್ಯಾಹ್ನ 1:30: ಬೆಂಗಳೂರಿಗೆ ಆಗಮಿಸಲಿದೆ (ಎಚ್ಎಎಲ್ ವಿಮಾನ ನಿಲ್ದಾಣ)
- 4-5 ಗಂಟೆಗೆ: ವಿಧಾನಸೌಧದಲ್ಲಿ ಸಿಎಂ ಮತ್ತು ಡಿಸಿಎಂ ಭೇಟಿ.
- ಸಂಜೆ 5 ಗಂಟೆಗೆ: ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ತೆರೆದ ಬಸ್ನಲ್ಲಿ ಮೆರವಣಿಗೆ
- ಸಂಜೆ 6 ಗಂಟೆಗೆ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಸಂಭ್ರಮಾಚರಣೆ
