ರೇಣುಕಾ ಸ್ವಾಮಿ ಪ್ರಕರಣ : ಪೊಲೀಸರಿಂದ ಮಹತ್ವದ ಸಾಕ್ಷಿ ಸಂಗ್ರಹ

ಬೆಂಗಳೂರು :

    ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್, ಅನಾರೋಗ್ಯ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿದ್ದಾರೆ. ಜೈಲಿನಿಂದ ತಾತ್ಕಾಲಿಕವಾಗಿ ಬಿಡುಗಡೆ ಪಡೆದಿರುವ ಖುಷಿ ಹಾರಿಹೋಗುವಂಥಹಾ ಸುದ್ದಿ ಇದೀಗ ಬಂದಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ವಿರುದ್ಧ ಮತ್ತೊಂದು ಪ್ರಬಲ ಸಾಕ್ಷಿ ಬೆಳಕಿಗೆ ಬಂದಿದೆ. ರೇಣುಕಾ ಸ್ವಾಮಿ ಶವದ ಮುಂದೆ ದರ್ಶನ್ ನಿಂತಿರುವ ಚಿತ್ರ ಇದೀಗ ಪೊಲೀಸರಿಗೆ ಲಭ್ಯವಾಗಿದೆ. ಅದನ್ನು ನ್ಯಾಯಾಲಯದ ಗಮನಕ್ಕೂ ತರಲಾಗಿದೆ.

 
    ರೇಣುಕಾ ಸ್ವಾಮಿ ಶವದ ಮುಂದೆ ದರ್ಶನ್ ಹಾಗೂ ಇತರೆ ಆರೋಪಿಗಳು ನಿಂತಿರುವ ಫೋಟೊಗಳು ಇದಾಗಿದ್ದು, ಪ್ರಕರಣದ ಆರೋಪಿಯೊಬ್ಬರ ಮೊಬೈಲ್​ನಿಂದ ಈ ಫೋಟೊಗಳನ್ನು ರಿಟ್ರೀವ್ ಮಾಡಲಾಗಿದೆ.ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ದೊರೆತ ಸಾಕ್ಷ್ಯಗಳನ್ನು ಪರೀಕ್ಷೆಗಾಗಿ ಹೈದರಾಬಾದ್ ಹಾಗೂ ಬೆಂಗಳೂರಿನ ಎಫ್​ಎಸ್​ಎಲ್ ಕೇಂದ್ರಗಳಿಗೆ ಕಳಿಸಿದ್ದರು. ಹೈದರಾಬಾದ್​ನಿಂದ ಕೆಲವು ವರದಿಗಳು ಬರುವುದು ಬಾಕಿ ಇದ್ದವು.
 
   ಅವು ಈಗ ಬಂದಿದ್ದು, ಆರೋಪಿ ಪವನ್​ ಅವರ ಮೊಬೈಲ್​ನಿಂದ ಕ್ಲಿಕ್ಕಿಸಲಾದ 2 ಫೋಟೋಗಳನ್ನು ರಿಕವರಿ ಮಾಡಲಾಗಿದೆ. ರೇಣುಕಾ ಸ್ವಾಮಿ ಶವನದ ಮುಂದೆ ದರ್ಶನ್ ಹಾಗೂ ಇತರೆ ಆರೋಪಿಗಳು ನಿಂತಿರುವ ಚಿತ್ರವನ್ನು ಪವನ್ ಕ್ಲಿಕ್ಕಿಸಿದ್ದರಂತೆ. ಆ ನಂತರ ಅವನ್ನು ಡಿಲೀಟ್ ಮಾಡಿದ್ದರು. ಆದರೆ ಎಫ್​ಎಸ್​ಎಲ್​ ಕೇಂದ್ರದವರು ತಂತ್ರಜ್ಞಾನ ಬಳಸಿ ಆ ಫೋಟೊಗಳನ್ನು ರಿಟ್ರೀವ್ ಮಾಡಿದ್ದಾರೆ.
   ಈಗ ಲಭ್ಯವಾಗಿರುವ ಚಿತ್ರದಲ್ಲಿ ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್, ನೀಲಿ ಬಣ್ಣದ ಟೀ ಶರ್ಟ್ ಧರಿಸಿ ದರ್ಶನ್ ನಿಂತಿರುವ ಚಿತ್ರವಿದೆ. ಚಿತ್ರದಲ್ಲಿ ಪ್ರಕರಣ ಇತರೆ ಕೆಲವು ಆರೋಪಿಗಳು ಸಹ ಇದ್ದಾರೆ. ಚಿತ್ರದಲ್ಲಿ ರೇಣುಕಾ ಸ್ವಾಮಿಯ ಶವವೂ ಇದೆ. ಈ ಚಿತ್ರವನ್ನು ಪವನ್ ತೆಗೆದಿದ್ದಾರೆ. ಪವನ್ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದ ಪೊಲೀಸರು ಅದನ್ನು ಎಫ್​ಎಸ್​ಎಲ್​ಗೆ ರವಾನಿಸಿದ್ದಾರೆ.

Recent Articles

spot_img

Related Stories

Share via
Copy link