ಬೆಂಗಳೂರು:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಜಾಮೀನು ಸಿಕ್ಕಿರುವ ಬಗ್ಗೆ ರೇಣುಕಾಸ್ವಾಮಿ ತಂದೆ ಶಿವನಗೌಡ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಲಯದಿಂದ ಆರೋಪಿಗಳಿಗೆ ಜಾಮೀನು ಸಿಕ್ಕಿದೆ ಎಂಬ ವಿಷಯ ಗೊತ್ತಾಗಿದೆ. ಆದರೆ, ಅಂತಿಮವಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ. ನ್ಯಾಯಾಲಯದ ಮೇಲೆ ನಮಗೆ ಪೂರ್ಣ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.
ನಾವು ಸರ್ಕಾರವನ್ನು ಕೇಳುವುದು ಇಷ್ಟೇ, ಸೊಸೆಗೆ ಕಾಯಂ ಸರ್ಕಾರಿ ನೌಕರಿ ನೀಡಬೇಕು ಎಂದು ಮನವಿ ಮಾಡುತ್ತೇವೆ. ಎಲ್ಲರಿಗೂ ಜಾಮೀನು ಸಿಕ್ಕಿದೆ ಎಂದು ಗೊತ್ತಾಗಿದೆ. ತಾತ್ಕಾಲಿಕವಾಗಿ ಆರೋಪಿಗಳಿಗೆ ಬೇಲ್ ಆಗಿರಬಹುದು. ಆದರೆ, ಅಂತಿಮವಾಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ ಎಂದು ಹೇಳಿದ್ದಾರೆ.
