ಬೆಂಗಳೂರು:
ಕೇಂದ್ರ ಸರ್ಕಾರಕ್ಕೆ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ(ST) ಸೇರಿಸುವಂತೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ.
ಮಂಗಳವಾರ ನಡೆದ ಸಚಿವ ಸಂಪು ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದ್ದು, ಈ ಸಂಬಂಧ STಗೆ ಸೇರಿಸುವಂತೆ ಶಿಫಾರಸು ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ.
ಈ ಹಿಂದೆ 2020-21ರಲ್ಲಿ ಸಮುದಾದ ಮುಖಂಡರು, ಸ್ವಾಮೀಜಿಗಳು ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಬೃಹತ್ ಸಂಖ್ಯೆಯಲ್ಲಿ ಪಾದಯಾತ್ರೆ ನಡೆಸಿದ್ದರು. ಈ ಸಂಬಂಧ ವರದಿ ತಯಾರಿಸುವಂತೆ ಕರ್ನಾಟಕ ರಾಜ್ಯ ಬುಡಕಟ್ಟು ಸಂಸ್ಥೆಗೆ ಅಂದಿನ ಸರ್ಕಾರ ಸೂಚಿಸಿತ್ತು.
ಕರ್ನಾಟಕ ರಾಜ್ಯ ಬುಡಕಟ್ಟು ಸಂಸ್ಥೆ ವರದಿ ನೀಡಿದ್ದು, ಈ ವರದಿಯಲ್ಲಿನ ಶಿಫಾರಸುಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.
![](https://prajapragathi.com/wp-content/uploads/2023/07/vidhana-1.jpg)