ನವದೆಹಲಿ :
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಭಾರೀ ಮುಖಭಂಗಕ್ಕೊಳಗಾಗಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್ಸಿಬಿ ತಂಡವು 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು. ಈ ಹೀನಾಯ ಸೋಲಿನ ಬೆನ್ನಲ್ಲೇ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯ ರಹಾನೆ ಪಿಚ್ ಬಗ್ಗೆ ಅಪಸ್ವರ ಎತ್ತಿದ್ದಾರೆ.
ಆರ್ಸಿಬಿ ವಿರುದ್ಧದ ಪಂದ್ಯದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ, ‘ಸ್ಪಿನ್ ಬೌಲರ್ಗಳಿಗೆ ಸಹಾಯಕವಾಗುವಂತಹ ಪಿಚ್ ನಮಗೆ ಬೇಕು. ಆದರೆ ಈ ಪಿಚ್ ಕಳೆದ ಒಂದೂವರೆ ದಿನಗಳಿಂದ ಮುಚ್ಚಿಡಲಾಗಿತ್ತು ಎಂದಿದ್ದರು.
ಅಲ್ಲದೆ ಕೆಕೆಆರ್ ತಂಡದಲ್ಲಿ ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿಯಂತಹ ಗುಣಮಟ್ಟದ ಸ್ಪಿನ್ನರ್ಗಳಿದ್ದಾರೆ. ಅವರು ಯಾವುದೇ ಪಿಚ್ನಲ್ಲಿ ಬೌಲಿಂಗ್ ಮಾಡಬಲ್ಲರು. ಇದಾಗ್ಯೂ ನಮಗೆ ತವರು ಮೈದಾನವು ಸಹಾಯಕವಾಗಬೇಕೆಂದು ರಹಾನೆ ಆಗ್ರಹಿಸಿದ್ದರು.
